ಬಿಸಿ ಬಿಸಿ ಸುದ್ದಿ

ಕಲಬುರಗಿ ರಂಗಾಯಣ: ತಂತ್ರಜ್ಞರು ಹಾಗೂ ಕಲಾವಿದರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ರಂಗಾಯಣದಿಂದ 3 ಜನ ತಂತ್ರಜ್ಞರು ಹಾಗೂ 12 ಜನಕಲಾವಿದರನ್ನು ತಾತ್ಕಾಲಿಕವಾಗಿ ಮೂರು ವರ್ಷಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳಾದ ಜಗದೀಶ್ವರಿ ಶಿವಕೇರಿ ಅವರು ತಿಳಿಸಿದ್ದಾರೆ.
ಸಂಗೀತ, ಧ್ವನಿ-ಬೆಳಕು, ರಂಗಸಜ್ಜಿಕೆ, ಪರಿಕರ ವಿಭಾಗದಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರುವ, ಕನ್ನಡ ಭಾμÉ ಓದುವ, ಬರೆಯುವ ಮತ್ತು ಮಾತಾನಾಡುವ ಸಾಮಥ್ರ್ಯವಿರುವ ತಂತ್ರಜ್ಞರನ್ನು ಆಯ್ಕೆ ಮಾಡಲಾಗುವುದು. ರಂಗಾನುಭವ ಮತ್ತು ಶೈಕ್ಷಣಿಕ ಅರ್ಹತೆಗಳು ಇದ್ದಲ್ಲಿ ಅಂತಹವರಿಗೆ ಆದ್ಯತೆ ನೀಡಲಾಗುವುದು. ಯಾವುದೇ ಭತ್ಯೆರಹಿತ ಮಾಸಿಕ ಗೌರವ ಸಂಭಾವನೆ 20,000 ರೂ. ನೀಡಲಾಗುತ್ತದೆ.
ಕಲಾವಿದರ ನೇಮಕದಲ್ಲಿ 4 ಜನ ಮಹಿಳೆಯರು ಮತ್ತು 4 ಜನ ಪ.ಜಾತಿ/ವರ್ಗದ ಕಲಾವಿದರಿಗೂ ಅವಕಾಶವಿದ್ದು, ಪ್ರಾದೇಶಿಕ ವಲಯದ, ರಂಗಪರಿಣಿತಿ ಹೊಂದಿರುವ, ರಂಗ ಪ್ರಯೋಗಗಳಲ್ಲಿ ಭಾಗವಹಿಸುವವರಿಗೆ, ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದವರಿಗೆ, ರಂಗಶಿಕ್ಷಣದ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ನೇಮಕಗೊಂಡ ಕಲಾವಿದರು ರಪರ್ಟಿಯಭಾಗವಾಗಿದ್ದು, ರಂಗ ಶಿಕ್ಷಣದ ಎಲ್ಲಾ ವಿಭಾಗಗಳಲ್ಲಿ ತರಬೇತಿ ಪಡೆಯುವುದರ ಜೊತೆಗೆ ಅಭಿನಯದ ಜವಾಬ್ದಾರಿಯನ್ನು ನಿಭಾಯಿಸಬೇಕು. ಮಾಸಿಕ ಶಿಷ್ಯವೇತನ ಯಾವುದೇ ಭತ್ಯೆ ರಹಿತಸಂಚಿತವಾಗಿ ತಿಂಗಳಿಗೆ 12,000 ರೂ., ಎರಡನೇ ವರ್ಷ 14,000 ರೂ. ಹಾಗೂ ಮೂರನೇ ವರ್ಷದಲ್ಲಿ 16,000 ರೂ.ಗಳನ್ನು ನೀಡಲಾಗುವುದು. ಕಲಾವಿದರ ವಯೋಮಿತಿ 25 ವರ್ಷದೊಳಗಿರಬೇಕು.
ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯು ರಂಗಾಯಣದ ಚಟುವಟಿಕೆಗಳ ಅಗತ್ಯದ ಹಿನ್ನೆಲೆಯಲ್ಲಿ ಗೌರವ ಸಂಭಾವನೆ ಆಧಾರದಲ್ಲಿ ಆಯ್ಕೆಮಾಡಿಕೊಳ್ಳಲಾಗುತ್ತದೆ. ಆಸಕ್ತರು ಸ್ವವಿವರದೊಂದಿಗೆ 2020ರ ಜುಲೈ 31 ರೊಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ, ಡಾ.ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲರಸ್ತೆ, ಕಲಬುರಗಿ – 585105, ವಿಳಾಸಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ rangayanakalaburgi@gmail.com, rangayanakalaburagi@gmail.com ಮೂಲಕ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರಂಗಾಯಣದ http://www.rangayanakalaburagi.com ವೆಬ್ಸೈಟ್ನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-227735ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.
emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

45 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

47 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

50 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago