ಬಿಸಿ ಬಿಸಿ ಸುದ್ದಿ

ಹೆಚ್.ವಿಶ್ವನಾಥ ಅವರಿಗಾಗಿ ಯಾವ ತ್ಯಾಗಕ್ಕೂ ಸಿದ್ಧ: ಸಚಿವ ರಮೇಶ ಜಾರಕೊಹೊಳೆ

ಸುರಪುರ: ಹೆಚ್.ವಿಶ್ವನಾಥ ಅವರ ರಾಜಕೀಯ ಭವಿಷ್ಯ ಮುಂದೆ ಉಜ್ವಲವಾಗಲಿದೆ.ವಿಶ್ವನಾಥ ಅವರಿಗಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳೆ ತಿಳಿಸಿದರು.

ನಗರದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ಮನೆಗೆ ಖಾಸಗಿ ಭೇಟಿ ಸಂದರ್ಭದಲ್ಲಿ ಸುದ್ದಿಗಾರರು ಕೇಳಲಾದ ಪ್ರಶ್ನೆಗೆ ಉತ್ತರಿಸಿ,ಹೆಚ್.ವಿಶ್ವನಾಥ ಅವರು ಮುಂದೆ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ.ಅವರ ರಾಜಕೀಯ ಭವಿಷ್ಯ ಮುಂದೆ ಹೇಗಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು.ಅಲ್ಲದೆ ಸುರಪುರ ನಗರದ ಜನತೆಗೆ ಕುಡಿಯುವ ನೀರಿನ ಅನುಕೂಲ ಸೇರಿ ಜನರಿಗಾಗಿ ಸುಮಾರು ೩೦೦ ಕೋಟಿ ಅಂದಾಜು ಮೊತ್ತದಲ್ಲಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧಗೊಳಿಸಲಾಗಿದೆ ಹಾಗೂ ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮೊದಲ ಬಾರಿಗೆ ಸಚಿವರಾಗಿ ಸುರಪುರ ನಗರಕ್ಕೆ ಭೇಟಿ ನೀಡಿದ ಸಚಿವರಿಗೆ ಶಾಸಕರ ನಿವಾಸದಲ್ಲಿ ಸನ್ಮಾನಿಸಿ ಬೆಳ್ಳಿ ಗದೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ನರಸಿಂಹ ನಾಯಕ (ರಾಜುಗೌಡ),ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಬೋಳಿ,ಬಿಜೆಪಿ ಜಿಲ್ಲಾಧ್ಯಕ್ಷ ಶರಣಭೂಪಾಲ ರಡ್ಡಿ,ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ),ಮುಖಂಡರಾದ ದೊಡ್ಡ ದೇಸಾಯಿ,ಭೀಮಣ್ಣ ಬೇವಿನಾಳ,ಬಸನಗೌಡ ಹಳ್ಳಿಕೋಟಿ,ನರಸಿಂಹಕಾಂತ ಪಂಚಮಗಿರಿ,ಹೆಚ್.ಸಿ.ಪಾಟೀಲ್,ಶಂಕರ ನಾಯಕ,ಶ್ರೀನಿವಾಸ ನಾಯಕ ದರಬಾರಿ,ಈಶ್ವರ ನಾಯಕ ಸೇರಿದಂತೆ ಅನೇಕರಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

1 hour ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

1 hour ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

2 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

3 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

3 hours ago