ಕಲಬುರಗಿಯಲ್ಲಿ ವಿವಿಧ ಬಡಾವಣೆಗಳಲ್ಲಿ ಡಿ.ಕೆ ಶಿವುಕುಮಾರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ

0
44

ಕಲಬುರಗಿ: ಬೆಂಗಳೂರಿನಲ್ಲಿ ಆಯೋಜಿಸಿರುವ  ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಅಧಿಕಾರ ವಹಿಸಿಕೊಂಡ ಡಿ.ಕೆ ಶಿವುಕುಮಾರ ಅವರ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ವಾರ್ಡನಂ. ೫೫.ರ ರಾಮಮಂದಿರ ಎದುರುಗಡೆ ಮಾಜಿ ಪಾಲಿಕೆ ಸದಸ್ಯ ಮಹೇಶ ಹೊಸೂರಕರ್ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಬಿ.ಹೆರೂರ ಇವರ ನೇತೃತ್ವದಲ್ಲಿ ವೀಕ್ಷಣೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಕಾರ್ಯದರ್ಶಿ ಭಿಮರಾಯ ಪೂಜಾರಿ ಮದರಿ, ರವಿ ಪೂಜಾರಿ, ವಿಜಯಕುಮಾರ ಧುದನಿ, ದಸರಥ ಸಿಂಗ್ ಇದ್ದರು.

ನಗರದ ಸಂತೋಷ ಕಾಲೊನಿಯಲ್ಲಿ ಜಿಲ್ಲಾ ಕಾಂಗ್ರೇಸ್ ಸೇವಾದಳ ಕಾರ್ಯದರ್ಶಿ ಭಿಮರಾಯ ಪೂಜಾರಿ ಮದರಿ ನೇತೃತ್ವದಲ್ಲಿ  ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಅಧಿಕಾರ ವಹಿಸಿಕೊಂಡ ಡಿ.ಕೆ ಶಿವುಕುಮಾರ ಅವರ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಬಿ.ಹೆರೂರ, ವಿಜಯಕುಮಾರ ಧುದನಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here