ಯಡಿಯೂರಪ್ಪ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

0
401

ಕಲಬುರಗಿ: ಪ್ರಜಾಪ್ರಭುತ್ವದಲ್ಲಿ ಜನರ ತೀರ್ಮಾನವೇ ಕೊನೆ, ಕಲಬುರಗಿ ಮತದಾರರು ನಮ್ಮ ವಿರುದ್ಧವಾಗಿ ತೀರ್ಪು ನೀಡಿದ್ದಾರೆ, ನಮ್ಮ ಕೆಲಸಕ್ಕೆ ಮತದಾರರು ಮನ್ನಣೆ ನೀಡಿಲ್ಲಾ, ಆದ್ರು ಕೂಡಾ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಮಾಣಿಕ ಯತ್ನ ಮಾಡುತ್ತೇವೆ ಎಂದು  ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಮ್ಮಿಶ್ರ ಸರ್ಕಾರ ಮತ್ತು ಸರ್ಕಾರದ ಯೋಜನೆ ಜನರಿಗೆ ಮುಟ್ಟಿಸಿದ್ದೇವೆ, ಹೀಗಾಗಿ ಅದರಿಂದ ವ್ಯತಿರಿಕ್ತ ಪರಿಣಾಮ ಆಯ್ತು ಅನ್ನೋದು ತಪ್ಪಾಗುತ್ತೆ, ಈ ಫಲಿತಾಂಶ ಸಮ್ಮಿಶ್ರ ಸರ್ಕಾರದ ಮೇಲೆ ಸಹಜವಾಗಿ ಪರಿಣಾಮ ಬೀರುತ್ತದೆ, ಯಡಿಯೂರಪ್ಪ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ, ಇದರಿಂದ ಆಪರೇಷನ್ ಕಮಲ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ, ಬೇರು ಮಟ್ಟದಿಂದ ಮತ್ತೆ ಪಕ್ಷ ಕಟ್ಟುತ್ತೇವೆ ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here