ಶಹಾಬಾದ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಶುಕ್ರವಾರ ಎಸ್ಯುಸಿಐ (ಸಿ) ಪಕ್ಷದ ವತಿಯಿಂದ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾಕಾರರು ಮಾತನಾಡಿ,ಇಡೀ ದೇಶದಲ್ಲಿ ಕೊರೊನಾ ಮಹಾಮಾರಿ ದಿನೇ ದಿನೇ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನಸಾಮನ್ಯರ ಬದುಕು ತತ್ತರಿಸಿ ಹೋಗಿದೆ.ಇದರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಳೆದ ೨೦ ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದೆ.ಇದರಿಂದ ನೇರವಾಗಿ ಸಾರ್ವಜನಿಕರ ಮೇಲೆ ಹೊರೆ ಬೀಳುತ್ತಿದೆ.ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಸರ್ಕಾರಗಳು ಕೋವಿಡ್-೧೯ ಸಂದರ್ಭದಲ್ಲಿ ಬೆಲೆ ಕಡಿಮೆ ಮಾಡುವುದನ್ನು ಬಿಟ್ಟು ಬೆಲೆ ಏರಿಕೆ ಮಾಡಿ, ಜನವಿರೋಧಿ ನೀತಿ ಅನುಸರಿಸಿ, ತಾವು ಮಾಡಿದ ಕೆಲಸ ಸರಿಯೆಂಬಂತೆ ವರ್ತಿಸುತ್ತಿದ್ದಾರೆ.
ಅಧಿಕಾರ ಪಡೆಯುವ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತೆವೆ.ಜನಪರ ಆಡಳಿತ ನೀಡುತ್ತೆವೆ. ಅಚ್ಚೆ ದಿನ್ ಆಯೆಂಗೆ ಎಂದು ಉದ್ದಕ್ಕೂ ಭಾಷಣ ಬಿಗಿದ ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಭರವಸೆಗಳನ್ನು ನೆನಪಿಸಿಕೊಳ್ಳಬೇಕಾಗಿದೆ.ಅಚ್ಚೆ ದಿನ್ ಎಂದರೆ ಇದೇನಾ ಎಂದು ವ್ಯಂಗವಾಡಿದರು.
ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಸುಮಾರು ೩೨ ರೂ. ತೆರಿಗೆ ಹಾಕುತ್ತಿದೆ. ಕಚ್ಚಾ ತೈಲದ ಬೆಲೆ ಲೀಟರ್ ಪೆಟ್ರೋಲ್ ಬೆಲೆ ಕೇವಲ ರೂ. ೨೮ ಮಾತ್ರ. ಆದರೆ ನಾವು ಪೆಟ್ರೋಲ್ ಗೆ ರೂ. ೮೩ ಪಾವತಿಸುತ್ತಿದ್ದೇವೆ.ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಎಸ್ಯುಸಿಐ(ಸಿ) ಪಕ್ಷದ ಸದಸ್ಯ ರಾಘವೇಂದ್ರ.ಎಮ್.ಜಿ,ಗುಂಡಮ್ಮ ಮಡಿವಾಳ,ಗಣಪತರಾವ ಮಾನೆ, ಸಿದ್ದು ಚೌಧರಿ, ಮಾತನಾಡಿದರು.ಎಸ್ಯುಸಿಐ(ಸಿ) ಸದಸ್ಯ ಜಗನ್ನಾಥ.ಎಸ್.ಹೆಚ್, ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ .ಎಸ್.ಇಬ್ರಾಹಿಂಪುರ, ನೀಲಕಂಠ ಹುಲಿ, ತಿಮ್ಮಾಯ್ಯಾ ಬಿ ಮಾನೆ , ರಾಧಿಕಾ ಚೌದರಿ,ರಮೇಶ ದೇವಕರ್,ರಘು.ಜಿಮಾನೆ,ಹಣಮಂತ,ಕಿರಣ್.ಜಿ.ಮಾನೆ,ಅಜಯ್, ರಂಗನಾತ್ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…