ಮತ್ತೆ ಲಾಕ್ ಡೌನ್ ಜಾರಿ ಬೇಡ: ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹ

0
20

ಕಲಬುರಗಿ: ಜುಲೈ ೭ರಿಂದ ಪುನ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಸರಕಾರ ಹೇಳುತ್ತಿದ್ದು, ಮತ್ತೆ ಲಾಕ್ ಡೌನ್ ಜಾರಿ ಮಾಡದಂತೆ ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ್ ಫರಹತಾಬಾದ, ಸುರೇಶ ಹನಗುಡಿ, ಅಂಬು ಮಸ್ಕಿ, ಸತೀಶ ಪರಹತಾಬಾದ, ರಾಹುಲ್ ಫರಹತಾಬಾದ, ಸುನೀಲ, ಅವೇಜ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here