ಶಹಾಬಾದ: ಪ್ರಜಾಪ್ರಭುತ್ವದ ಕಾವಲುನಾಯಿ ಎಂದೇ ಕರೆಯಲ್ಪಡುವ ಪತ್ರಿಕಾ ರಂಗ ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಪ್ರಜಾಪ್ರಭುತ್ವದ ಉಳಿವಿಗೆ ಸಾಕಷ್ಟು ಶ್ರಮವಹಿಸುತ್ತಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದಶರ್ಿ ಲೋಹಿತ್ ಕಟ್ಟಿ ಹೇಳಿದರು.
ಅವರು ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪತ್ರಿಕಾ ದಿನಾಚರಣೆಯ ನಿಮಿತ್ತ ಪತ್ರಕರ್ತರಿಗೆ ಆಯೋಜಿಸಲಾದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಕಾಯರ್ಾಂಗ, ನ್ಯಾಯಾಂಗ, ಶಾಸಕಾಂಗ ಪ್ರಜಾಪ್ರಭುತ್ವದ ಮೂರು ಅಂಗಗಳಾದರೆ ನಾಲ್ಕನೇ ಅಂಗವೇ ಪತ್ರಿಕಾರಂಗ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳನ್ನು ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗುತ್ತದೆ.ಸರಕಾರ ಮತ್ತು ಜನತೆಯ ನಡುವೆ ಮಾಧ್ಯಮಗಳು ಸೇತುವೆಗಳಾಗಿ ಕೆಲಸ ಮಾಡುತ್ತವೆ.ಸಂವಿಧಾನಬದ್ಧ ಆಡಳಿತ ಸಂಸ್ಥೆಗಳು ಹದ್ದುಮೀರಿದಾಗ ಅವುಗಳ ಹೊಣೆಗಾರಿಕೆಯನ್ನು ನೆನಪಿಸುವ ಹಾಗೂ ಸರಿದಾರಿಗೆ ಬರುವಂತೆ ಕೆಲಸ ಮಾಡುತ್ತಿದೆ. ಇಂದು ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನವೇಶದಲ್ಲಿ ಕಾರ್ಯನಿರ್ವಹಿಸುತ್ತಾರೆ.ಅಲ್ಲದೇ ಸಮಾಜದ ಅಭಿವೃದ್ಧಿಗೆ ಪೂರಕವಾದ ವರದಿ ನೀಡಿದಾಗ ಪತ್ರಕರ್ತನ ಘನತೆ ಹೆಚ್ಚುತ್ತದೆ ಎಂದು ಹೇಳಿದರು.
ನಂತರ ಸ್ಥಳೀಯ ಪತ್ರಕರ್ತರಾದ ರಮೇಶಭಟ್, ಮಲ್ಲಿನಾಥ ಪಾಟೀಲ, ವಾಸುದೇವ ಚವ್ಹಾಣ ಹಾಗೂ ರಘುವೀರಸಿಂಗ ಠಾಕೂರ ಅವರನ್ನು ಅವರನ್ನು ಸನ್ಮಾನಿಸಲಾಯಿತು.
ಜೆಡಿಎಸ್ ಅಧ್ಯಕ್ಷ ರಾಜ ಮಹ್ಮದ್ರಾಜಾ,ಮುಖಂಡರಾದ ವಿಜಯಲಕ್ಷ್ಮಿ ಬಂಗರಗಿ, ಸಬ್ದುಲ್ ಜಬ್ಬಾರ್, ಚಾಂದ್ ವಾಹೀದಿ,ಹನುಮಾನ ಕಾಂಬಳೆ, ಹೀರಾ ಪವಾರ,ಯುಸೂಫ್ ಸಾಹೇಬ, ಸುನೀಲ ಚವ್ಹಾಣ ಸೇರಿದಂತೆ ಇತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…