ಕೊರೋನಾ ಹಿನ್ನೆಲೆಯಲ್ಲಿ ಹೃದಯ ರೋಗದ ಲಕ್ಷಣವಿರುವ ರೋಗಿಗಳಿಗೆ ಮಾತ್ರ ಓ.ಪಿ.ಡಿ.ಸೇವೆ ಲಭ್ಯ

0
42
ಕಲಬುರಗಿ: ಕೊರೋನಾ ಹಿನ್ನೆಲೆಯಲ್ಲಿ ಕಲಬುರಗಿಯ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಓ.ಪಿ.ಡಿ. ಸೇವೆಗೆ ನಿರ್ಭಂಧಿಸಲಾಗಿದ್ದು, ಹೃದ್ರೋಗಕ್ಕೆ ಸಂಬಂಧಿಸಿದಂತೆ ಲಕ್ಷಣವಿರುವ ಮತ್ತು ಹೃದಯ ಕಾಯಿಲೆಯ ತುರ್ತು ಪ್ರಕರಣಗಳಲ್ಲಿ ಮಾತ್ರ ಓ.ಪಿ.ಡಿ. ಸೇವೆ ಲಭ್ಯವಿರಲಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 6 ರಿಂದ ಅನ್ವಯವಾಗುವಂತೆ ಇದು ಜಾರಿಗೆ ಬರಲಿದ್ದು, ಹೃದಯ ಕಾಯಿಲೆಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾದವರು 4-6 ವಾರಗಳ ನಂತರ ಅಥವಾ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳುವುದು. ಆದಾಗಿಯೂ ತುರ್ತು ಸಂದರ್ಭದಲ್ಲಿ ಸೇವೆ ನೀಡಲು ಸಂಸ್ಥೆ 24 ಗಂಟೆ ಕಾಲ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here