ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಹೆಚ್ಚುತ್ತಿದೆ ಕರೊನಾ-ಆತಂಕದಲ್ಲಿ ಜನ

ಶಹಾಬಾದ:ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕರೊನಾ ಸೊಂಕು ಹೆಚ್ಚಾಗುತ್ತಿದ್ದು, ಒಂದೇ ದಿನ ಸುಮಾರು 10 ಜನರಿಗೆ ಕರೊನಾ ಸೊಂಕು ಪತ್ತೆಯಾಗಿದ್ದು, ಒಬ್ಬ ಸೊಂಕಿತ ವ್ಯಕ್ತಿ ಮೃತಪಟ್ಟಿದ್ದರಿಂದ ಸಾರ್ವಜನಿಕರಲ್ಲಿ ಆತಂಕದ ಮನೆಮಾಡಿದೆ.

ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ 4 ಜನ ಪೊಲೀಸರಿಗೆ ಸೊಂಕು ದೃಢಪಟ್ಟಿದೆ. ಭಂಕೂರ ಗ್ರಾಮದ ನಾಲ್ಕು ಜನರಿಗೆ ಸೊಂಕು ತಗುಲಿದೆ. ಬೆಂಡಿಬಜಾರನ ಒಬ್ಬರಿಗೆ ಪಾಸಿಟಿವ್ ಬಂದರೆ, ಹಳೆಶಹಾಬಾದನ ಒಬ್ಬ ವ್ಯಕ್ತಿಗೆ ಕರೊನಾ ಸೊಂಕು ಕಂಡುಬಂದಿದೆ.ಇವರೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳಿಸಲಾಗಿದೆ. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಇಬ್ಬರನ್ನು ಹೋಮ್ ಕ್ವಾರಂಟೈನ್ ಇಡಲಾಗಿದೆ.ಅಲ್ಲದೇ ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.ಭಂಕೂರ ಗ್ರಾಮದಲ್ಲಿ ಎಲ್ಲಿಲ್ಲದ ಭಯ ಆವರಿಸಿದೆ. ತಾಲೂಕಿನಲ್ಲಿಯೇ ಗ್ರಾಮೀಣ ಭಾಗದಲ್ಲಿ ಒಂದೇ ದಿನದಲ್ಲಿ ಹೆಚ್ಚು ಕೇಸ್ ಪತ್ತೆಯಾಗಿದ್ದು ಆತಂಕ ಸೃಷ್ಠಿಸಿದೆ.

ಜನ ಪೊಲೀಸರೆಂದರೆ ಭಯಪಡುತ್ತಿದ್ದರು.ಆದರೆ ಇಂದು ಪೊಲೀಸರು ಭಯಪಡುವಂತ ವಾತಾವರಣ ಕರೊನಾ ನಿರ್ಮಾಣ ಮಾಡಿದೆ. ತಾಲೂಕಾಢಳಿತ ಸೊಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದಾರೆ.ಸಾರ್ವಜನಿಕರು ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.ಮಾಸ್ಕ್ ಧರಿಸಿ, ಸ್ಯಾನಿಟೈಜರ್ ಬಳಸಿ.ಕುಡಿಯಲು ದಿನಕ್ಕೆ ಮೂರು ಬಾರಿ ಬಿಸಿ ನೀರು ಬಳಕೆ ಮಾಡಿ.ಇದರಿಂದ ರೋಗವನ್ನು ತಡೆಗಟ್ಟಲು ಸಾಧ್ಯ.ಅಲ್ಲದೇ ಸರ್ಕಾರ ನಿಯಮಗಳನ್ನು ಪಾಲನೆ ಮಾಡಿ ಎಂದು ತಹಸೀಲ್ದಾರ ಸುರೇಶ ವರ್ಮಾ ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಪೌರಾಯುಕ್ತ ಕೆ.ಗುರಲಿಂಗಪ್ಪ, ಪಿಐ ಅಮರೇಶ.ಬಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ನೈರ್ಮಲ್ಯ ನಿರೀಕ್ಷಕರಾದ ಶರಣು, ರಾಜೇಶ, ಉಣೇಶ, ಅನೀಲಕುಮಾರ, ನಾಗೇಂದ್ರ ತಳವಾರ, ಹುಸೇನ ಪಾಷಾ, ಸೋಮು ರಾಠೋಡ ಇತರರು ಇದ್ದರು.

emedia line

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago