ಬಡ ವರ್ಗದ ಹಸಿವು ನೀಗಿಸಿದವರು ಜಗಜೀವನರಾಮ-ಬೆಳಮಗಿ

0
28

ಶಹಾಬಾದ: ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ ಎಂದು ಬಾಬು ಜಗಜೀವನರಾಮ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ನಾಗಪ್ಪ ಮಾಸ್ಟರ್ ಬೆಳಮಗಿ ಹೇಳಿದರು.

ಅವರು ಸೋಮವಾರ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ನಗರಸಭೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು. ಜಗಜೀವನರಾಮ ಅವರು ತಮ್ಮ ಜೀವನದಲ್ಲಿ ದೇಶದಲ್ಲಿರುವ ಬಡಜನರ ಏಳಿಗೆಗಾಗಿ ನಿರಂತರ ಹೋರಾಟ ನಡೆಸಿದರಲ್ಲದೇ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಗಾಂಧೀಜಿ ಜತೆ ಕೈಗೂಡಿಸಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಕೊಳ್ಳುವಂತಾಗಬೇಕೆಂದು ಹೇಳಿದರು.
ದಲಿತ ಮಾದಿಗ ಸಮನ್ವಯ ಸಮಿತಿ ಅಧ್ಯಕ್ಷ ಶಿವರಾಜ ಕೋರೆ ಮಾತನಾಡಿ,ಸಮಾಜದ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು. ಅವರು ದೇಶದ ಉಪಪ್ರಧಾನಿಗಳಾಗಿದ್ದ ಸದಂರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ರವಿ ಬೆಳಮಗಿ,ಸಹಕಾರ್ಯದರ್ಶಿ ಶ್ರೀಧರ ಕೊಲ್ಲೂರ್,ಭೀಮರಾಯ ಕನಗನಹಳ್ಳಿ,ರವಿ ಕೋಬಾಳ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here