ಸುರಪುರ: ರಾಜ್ಯದಲ್ಲಿ ಅತೀ ಹಿಂದುಳಿದ ಭಾಗವೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ಸರಕಾರಗಳು ಅಭೀವೃಧ್ಧಿಗೆ ಆದ್ಯತೆ ನೀಡಿವೆ.ಆದರೆ ಈಗ ಮಾನ್ಯ ಯಡಿಯೂರಪ್ಪನವರು ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿ ತಡೆಹಿಡಿಯುವಂತೆ ಆದೇಶ ಮಾಡಿರುವುದು ಈ ಭಾಗಕ್ಕೆ ಮಾಡುವ ಅನ್ಯಾಯವಾಗಿದೆ ಎಂದು ಅನ್ನದಾತ ಪೌಂಡೇಶನ್ ಅಧ್ಯಕ್ಷ ಹಾಗು ಕುರುಬ ಸಮುದಾಯದ ಯುವ ಮುಖಂಡ ರಂಗನಗೌಡ ಪಾಟೀಲ್ ದೇವಿಕೆರಾ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಅಖಂಡ ಕರ್ನಾಟಕದ ಅಭೀವೃಧ್ಧಿಗಾಗಿ ಹಾಗು ಕಾವೇರಿ,ಮಹಾದಾಯಿ ವಿಚಾರವಿರಲಿ. ನಾಡು ನುಡಿ ಗಡಿಯ ವಿಚಾರವಿರಲಿ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರ ಬಂದಾಗ ಮೊದಲು ಧ್ವನಿ ಎತ್ತುವವರು ಕಲ್ಯಾಣ ಕರ್ನಾಟಕ ಭಾಗದ ಜನತೆ.ಆದರೆ ಇಂದು ಸರಕಾರ ಈ ಭಾಗದ ಅಭೀವೃಧ್ಧಿಗೆ ಕೊಡಲಿ ಪೆಟ್ಟು ನೀಡುವ ರೀತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿ ತಡೆ ಹಿಡಿಯುವಂತೆ ಆದೇಶ ಹೊರಡಿಸಿರುವುದು ನೋವಿನ ಸಂಗತಿಯಾಗಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡಲೆ ಆದೇಶವನ್ನು ವಾಪಸ್ ಪಡೆದು ಈ ಭಾಗದ ಅಭೀವೃಧ್ಧಿಗಾಗಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುಂಬಬೇಕೆಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…