ಸುರಪುರ: ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಬೆಲೆ ಪ್ರತಿ ಬ್ಯಾರಲ್ಗೆ ೪೩ ಯುಎಸ್ ಡಾಲರ್ನ ಆಸುಪಾಸಿನಲ್ಲಿದ್ದರು ನಮ್ಮ ದೇಶದಲ್ಲಿ ಮಾತ್ರ ಇನ್ನು ತೈಲ ಬೆಲೆ ಇಳಿಕೆ ಕಂಡಿಲ್ಲಾ ಸತತವಾಗಿ ಕಳೆದ ಆರು ವರ್ಷಗಳಿಂದ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಕೆ ಮಾಡುವುದನ್ನು ಬಿಟ್ಟು ಪದೆ ಪದೆ ಬೆಲೆ ಏರಿಕೆಮಾಡುತ್ತಿದೆ ಇದರಿಂದ ಜನರು ದುಡಿಮೆಯ ಅರ್ಧಭಾಗದಷ್ಟು ಬರಿ ಪೆಟ್ರೋಲ ಮತ್ತು ಡೀಸಲಗಾಗಿ ನೀಡುವ ಪರಿಸ್ಥಿತಿ ಎದುರಾಗಿದೆ ತಕ್ಷಣವೆ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಕಡಿಮೆಗೊಳಿಸಬೇಕು ಎಂದು ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಹಶಿಲ್ದಾರ ಕಛೇರಿ ಮುಂಭಾಗದಲ್ಲಿ ಗುರುವಾರ ತಾಲೂಕು ಬ್ಲಾಕ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಅವರು ಕರೊನಾ ಸೊಂಕಿನಿಂದಾಗಿ ಕಳೆದ ಕೆಲತಿಂಗಳು ಇಡಿ ದೇಶವೆ ಲಾಕ್ ಡೌನಾಗಿ ಜನರು ಒಂದು ದಿನದ ದುಡಿಮೆಗೆ ಕಷ್ಟಪಡುತ್ತಿದ್ದಾರೆ ಇತಂಹ ಸಮಯದಲ್ಲಿ ಕೇಂದ್ರ ಸರ್ಕಾರ ಬಡ ಜನತೆಯ ನೆರವಿಗೆ ಬಂದು ಅವರ ಕಷ್ಟಕ್ಕೆ ಸ್ಪಂದಿಸಬೇಕಾಗಿತ್ತು ಆದರೆ ಸರ್ಕಾರವು ಪ್ರತಿ ದಿನವು ತೈಲ ಬೆಲೆಯನ್ನು ಏರಿಕೆ ಮಾಡಿ ಇತಂಹ ವಿಷಮ ಪರಿಸ್ಥಿತಿಯಲ್ಲೂ ಜನರ ಜೇಬಿಗೆ ಕತ್ತರಿಹಾಕುವ ಕೆಲಸ ಮಾಡುತ್ತಿರುವುದನ್ನು ಖಂಡಿಸಿದರು.
ಪ್ರತಿಭಟನೆಯ ಆರಂಭದಲ್ಲಿ ಕೇಂದ್ರ ಸರಕಾರದ ವಿರುಧ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ನಂತರ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶಿಲ್ದಾರ ನಿಂಗಣ್ಣ ಬಿರಾದರ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶಕೀಲ ಅಹ್ಮದ್, ಮಹಿಬೂಬು ಸಾಬ, ಮುಖಂಡರಾದ ವೆಂಕಟರೆಡ್ಡಿ ಬೊವಿ, ವೆಂಕಟೇಶ ಸತ್ಯಂಪೆಟ, ಮಾಳಪ್ಪ ಕಿರದಳ್ಳಿ, ದಾವುದ್ ಪಠಾಣ, ಶರಣು ಸಾಹುಕಾರ ಕಳ್ಳಿಮನಿ, ಸಂಗಣ್ಣಗೌಡ ಪಾಟೀಲ್, ಮಹ್ಮದ್ ಮೌಲಾ, ಸಿದ್ರಾಮ ಎಲಿಗಾರ, ಜಹೀರ ರಂಗಂಪೇಟ, ಶರೀಫ ಅಹ್ಮದ್ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…