ವಾಡಿ: ಕೊರೊನಾ ಹೊಡೆತದಿಂದ ತತ್ತರಿಸಿರುವ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರಿಗೆ ಗೌರವ ವೇತನ ಕೈಗಿಟ್ಟು ರಜೆ ದಿನಗಳ ಸಂಕಷ್ಟಗಳನ್ನು ಮರೆತಿರುವ ಸರಕಾರ ಅಗೌರವದಿಂದ ನಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯದ ಅತಿಥಿ ಶಿಕ್ಷಕ ಸಮುದಾಯ ಆಲ್ ಇಂಡಿಯಾ ಡೆಮಾಕ್ರೇಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಶುಕ್ರವಾರ ಕರೆ ಕೊಟ್ಟ ಆನ್ಲೈನ್ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಅತಿಥಿ ಉಪನ್ಯಾಸಕರು-ಶಿಕ್ಷಕರು, ತಮ್ಮ ಮನೆಯಂಗಳದಲ್ಲಿ ನಿಂತು ಬೇಡಿಕೆಗಳ ಬಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಸರಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಸರಕಾರ ಅತ್ಯಂತ ಕಡಿಮೆ ವೇತನವನ್ನು ಕೊಟ್ಟು ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೋಧನೆಯಿಲ್ಲದೆ ಮನೆಯಲ್ಲಿ ಉಳಿದುಕೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ.
ರಜೆ ತಿಂಗಳ ವೇತನ ಇಲ್ಲವಾದ್ದರಿಂದ ಬದುಕು ತೂಗಿಸುವುದು ಕಷ್ಟದ ಕೆಲಸವಾಗಿದೆ. ಸರಕಾರ ಕೋವಿಡ್-೧೯ ಪ್ಯಾಕೇಜ್ ಘೋಷಿಸದೆ ಅನ್ಯಾಯ ಮಾಡಿದೆ ಎಂದು ದೂರಿದ ವಾಡಿ, ರಾವೂರ, ನಾಲವಾರ ವಲಯದ ಅತಿಥಿ ಶಿಕ್ಷಕರು, ಸಮಾನ ದುಡಿಮೆಗೆ ಸಮಾನ ವೇತನ ಮಂಜೂರು ಮಾಡಬೇಕು. ಕೋವಿಡ್ ಸಂಕಷ್ಟ ಪರಿಹಾರ ಘೋಷಿಸಬೇಕು. ರಜೆ ತಿಂಗಳ ವೇತನ ಮಂಜೂರು ಮಾಡಬೇಕು. ಗೌರವ ಧನ ಹೆಚ್ಚಿಸಬೇಕು. ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…