ಹೈದರಾಬಾದ್ ಕರ್ನಾಟಕ

ಲೋಕೋಪಯೋಗಿ ಇಲಾಖೆಯ ಕಾಮಗಾರಿ ಕಳಪೆ ಕ್ರಮಕ್ಕೆ ಒತ್ತಾಯ

ಶಹಾಬಾದ: ತಾಲೂಕಿನ ಭಂಕೂರ ಹಾಗೂ ಮುತ್ತಗಾ ಗ್ರಾಮದ ಮಧ್ಯೆ ಲೋಕೋಪಯೋಗಿ ಇಲಾಖೆಯ ಸುಮಾರು 4.25 ಕೋಟಿ ರೂ. ಕಾಮಗಾರಿ ಕಳಪೆ ಮಟ್ಟದಿಂದ ನಡೆಯುತ್ತಿದ್ದರೂ ಸಂಬಂಧಿಸಿದ ಜೆಇ ಹಾಗೂ ಎಇಇ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಮುಖಂಡ ಮಹೇಂದ್ರ ಕೋರಿ ಆರೋಪಿಸಿದ್ದಾರೆ.

ರಸ್ತೆ ಕಾಮಗಾರಿ ಮಾಡುವಾಗ ಮುರುಮ್ ಮತ್ತು ಕಂಕರ್ ಹಾಕಿ ರೋಲರ್ ಮೂಲಕ ಸಮತಟ್ಟು ಮಾಡಬೇಕು.ಆದರೆ ಇಲ್ಲಿ ರಸ್ತೆಯ ಬದಿಯಲ್ಲಿರುವ ಹೊಲದ ಮಣ್ಣು, ಕಲ್ಲಿನ ಗಣಿಯಲ್ಲಿರುವ ತ್ಯಾಜ್ಯ ಕಲ್ಲುಗಳನ್ನು ಹಾಕಿದ್ದಾರೆ.ಇದು ನಿಯಮ ಬಾಹಿರವಾದರೂ ಗುತ್ತಿಗೆದಾರರು ಮಾತ್ರ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.ಅಲ್ಲದೇ ಮಳೆಗಾಲ ಬಂದಾಗ ಮಳೆ ನೀರು ಭಾರಿ ಪ್ರಮಾಣದಲ್ಲಿ ಹರಿದು ಬಂದು ಪೂಲ್ಗಳ ಮೇಲೆ ಬರುವ ಮೂಲಕ ಎರಡು ಗ್ರಾಮಗಳಿಗೆ ಸಂಚಾರ ಅಡಚಣೆಯಾಗುತ್ತಾ ಇರುತ್ತದೆ. ಇಂತಹ ಪೂಲ್ಗಳ ನಿರ್ಮಾಣ ಮಾಡಿದ ಎರಡು ದಿನಗಳ ಒಳಗೆ ಹಾಕಿದ ಸಿಮೆಂಟ್ ರಿಂಗ್ (ಗುಮ್ಮಿ)ಒಡೆದು ಹೋಗಿದೆ.ಅಲ್ಲದೇ ಹಳೆಯ ಪೂಲ್ ತೆಗೆದು ಹೊಸ ಪೂಲ್ ನಿರ್ಮಾಣ ಕಾರ್ಯ ಸಂಪೂರ್ಣ ಕಾಮಗಾರಿ ಕಳಪೆ ಮಾಡಿರುವುದಕ್ಕೆ ಅಲ್ಲಿನ ಪೂಲ್ ನೋಡಿದರೇ ಗೊತ್ತಾಗುತ್ತದೆ.ಹಳೆಯ ಪೂಲ್ನ ಕೆಳಗಡೆ ನೀರು ಹರಿದು ಹೋಗಲು ಸುಮಾರು 12 ಸಿಮೆಂಟ ರಿಂಗ್ಗಳನ್ನು ಅಳವಡಿಸಲಾಗಿತ್ತು.ಆದರೆ ಗುತ್ತಿಗೆದಾರ ಹಳೆಯ ಪೂಲ್ ಸಂಪೂರ್ಣ ಬೀಳಿಸದೇ, ಅರ್ಧದಷ್ಟು ಬೀಳಿಸಿ, ಕೇವಲ ನಾಲ್ಕು ಗುಮ್ಮಿಗಳನ್ನು ಹಾಕಿದ್ದಾರೆ.ಅಲ್ಲದೇ ಹಳೆಯ ಪೂಲ್ ಅಷ್ಟೇ ಬಿಟ್ಟಿದ್ದರಿಂದ ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ.

ಇಷ್ಟೊಂದು ಕಳಪೆ ಕಾಮಗಾರಿ ಮಾಡಿದರೂ ಸಂಬಂಧಪಟ್ಟ ಜೆಇ ಮತ್ತು ಎಇಇ ನೋಡಿಯೂ ನೋಡದಂತೆ ಹೋಗುತ್ತಿದ್ದಾರೆ.ಇದರಲ್ಲಿ ಅವರು ಶಾಮೀಲಾಗಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ.ಅಲ್ಲದೇ ಕ್ಷೇತ್ರದ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೂ ತರಲಾಗಿದೆ. ಕೂಡಲೇ ಕಳಪೆ ಮಟ್ಟದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ನಿಲ್ಲಿಸಬೇಕು. ಅವರ ಬಿಲ್ ತಡೆಹಿಡಿದು ಕ್ರಮಕೈಗೊಳ್ಳಬೇಕು.ಇಲ್ಲದಿದ್ದರೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಮಹೇಂದ್ರ ಕೋರಿ ಎಚ್ಚರಿಕೆ ನೀಡಿದ್ದಾರೆ.

emedia line

Recent Posts

ಅಂಗವಿಕಲ ಫಲಾನುಭವಿಗಳಿಂದ ಹಿರಿಯ ಅಧಿಕಾರಿಗಳಿಗೆ ಅಭಿನಂದನಾ ಮಹಾಪುರ

ಕಲಬುರಗಿ: ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಅಂಗವಿಕಲ ಕಲ್ಯಾಣ…

39 mins ago

ಸೆ. 23ಕ್ಕೆ ಕಲಬುರಗಿಯಲ್ಲಿ ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ: ಬಾಕಿ ಕಡತ ತ್ವರಿತ ವಿಲೇವಾರಿಗೆ ಡಿ.ಸಿ. ಸೂಚನೆ

ಕಲಬುರಗಿ; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಜನಸ್ಪಂದನಾ” ಸಭೆ ನಡೆಸಲಿದ್ದು, ಈ…

14 hours ago

ನೂತನ ಪೊಲೀಸ್ ಆಯುಕ್ತರಾಗಿ ಡಾ.ಶರಣಪ್ಪ ಎಸ್.ಡಿ ಅಧಿಕಾರ ಸ್ವೀಕಾರ

ಕಲಬುರಗಿ; ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತರಾಗಿ 2009ನೇ ಬ್ಯಾಚಿನ್ ಐ.ಪಿ.ಎಸ್. ಅಧಿಕಾರಿ ಡಾ.ಶರಣಪ್ಪ ಎಸ್.ಡಿ ಅವರು ಶುಕ್ರವಾರ ಪೊಲೀಸ್…

14 hours ago

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…

14 hours ago

ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಮಹತ್ವದ ಸಭೆ

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಇಂದು ವಿಧಾನ ಸೌಧದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾನ್ಯ ವೈದ್ಯಕೀಯ…

14 hours ago

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ವಿಮಾನ ನಿಲ್ದಾಣ, ಬಂದರು ಸೇರಿ ಹಲವು ಕಡೆ ಬಿಗಿಕ್ರಮ

ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420