ಸುರಪುರ: ತಾಲೂಕಿನಲ್ಲಿ ಪದೆ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದ್ದು ಇದರಿಂದ ನಗರ ಪ್ರದೇಶದಲ್ಲಿನ ವ್ಯಾಪಾರೋದ್ಯಮಿಗಳಿಗೆ ತುಂಬಾ ಕಿರಿ ಕಿರಿ ಉಂಟಾಗುತ್ತಿದೆ ಎಂದು ಲೋಕ ಜನಶಕ್ತಿ ಪಕ್ಷದ ಮುಖಂಡರು ಆರೋಪಿಸಿದರು.
ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿ,ಈಗಾಗಲೆ ತಾಲೂಕಿನ ವ್ಯಾಪಾರಸ್ಥರು ಕೊರೊನಾ ವೈರಸ್ ನಿಂದ ಲಾಕ್ಡೌನ್ ಘೋಷಣೆಯಾಗಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಸಿಲುಕಿದ್ದಾರೆ.
ಈಗ ವ್ಯಾಪಾರಿಗಳಿಗೆ ಸಮಯದ ಗಡುವಿನಲ್ಲಿ ವ್ಯಾಪಾರಕ್ಕೆ ಅವಕಾಶವಿರುವಾಗ, ಜೆಸ್ಕಾಂ ಇಲಾಖೆ ಪದೆ ಪದೆ ವಿದ್ಯೂತ್ ಕಡಿತಗೊಳಿಸುವುದರಿಂದ ವ್ಯಾಪಾರಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.ಆದ್ದರಿಂದ ವಿನಾಃ ಕಾರಣ ವಿದ್ಯೂತ್ ಕಡಿತಗೊಳಿಸದೆ ನಿರಂತರವಾಗಿ ವಿದ್ಯೂತ್ ಸರಬರಾಜು ಮಾಡಿ,ಇಲ್ಲವಾದಲ್ಲಿ ಜೆಸ್ಕಾಂ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾಅ ಅಪ್ಪಾರಾವ್ ನಾಯಕ,ತಾಲೂಕು ಅಧ್ಯಕ್ಷ ಹಯ್ಯಾಳಪ್ಪ ವನಕೇರಿ ದೀವಳಗುಡ್ಡ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…