ಬಾಬಾ ಸಾಹೇಬ ಅಂಬೇಡ್ಕರ್ ನಿವಾಸದ ಮೇಲೆ ನಡೆದ ದಾಳಿ ಖಂಡನೀಯ: ಬಸವರಾಜ ಮುಷ್ಠಳ್ಳಿ

ಸುರಪುರ: ನಗರದ ತಹಸೀಲ್ದಾರ ಕಚೇರಿ ಆವರಣದಲ್ಲಿ ಮಾದಿಗ ಯುವ ಸೇನೆ ತಾಲೂಕು ಪ್ರಚಾರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ,ಮುಂಬೈನ ದಾದರನಲ್ಲಿ ನಡೆದ ಡಾ: ಬಿ.ಆರ್.ಅಂಬೇಡ್ಕರರ ಮನೆಯ ಮೇಲಿನ ದಾಳಿಯನ್ನು ಖಂಡಿಸಿದರು.

ಪ್ರತಿಭಟೆನಯ ನೇತೃತ್ವ ವಹಿಸಿದ್ದ ಸಮಿತಿ ಅಧ್ಯಕ್ಷ ಬಸವರಾಜ ಮುಷ್ಠಳ್ಳಿ ಮಾತನಾಡಿ, ದೇಶದಲ್ಲಿ ದಿನನಿತ್ಯವೂ ಕೂಡ ದಲಿತರ ಮೇಲೆ ಹಲ್ಲೆಗಳು ಕೊಲೆಗಳು ನಡೆಯುತ್ತಿವೆ ಅಲ್ಲದೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಬದುಕಿದ ಮುಂಬೈನ ದಾದರನಲ್ಲಿರುವ ಮನೆಯ ಮೇಲೆ ದಾಳಿ ಮಾಡಿರುವ ಕೋಮುವಾದಿಗಳು ಮನೆಯ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಅಲ್ಲದೆ ಮನೆಯ ಹಿಂಬದಿಯ ಗ್ರಂಥಾಲಯವನ್ನು ಕೂಡ ಧ್ವಂಸಗೊಳಿಸಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಜಗತ್ತಿಗೆ ಮಾದರಿಯಾಗುವ ಸಂವಿದಾನವನ್ನು ನಮ್ಮ ದೇಶಕ್ಕೆ ಕೊಡುಗೆ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ನೀವಾಸವನ್ನು ಒಂದು ಪವಿತ್ರ ಸ್ಥಳವಾಗಿ ಕಾಣುತ್ತೇವೆ, ಆದರೆ ಕೆಲವು ದುಷ್ಕರ್ಮಿಗಳು ಮನೆಯ ಮೇಲೆ ದಾಳಿ ಮಾಡಿ ಹೇಯ ಕೃತ್ಯ್ಕ ಎಸಗಿರುವುದು ಇಡಿ ದೇಶವೆ ತಲೆತಗ್ಗಿಸುವ ಸಂಗತಿಯಾಗಿದೆ ಈ ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸದೆ ಸರ್ಕಾರ ನಿದ್ದೆ ಮಾಡುತ್ತಿದೆ.ಅಂಬೇಡ್ಕರರನ್ನು ಅವಮಾನಿಸಿದರೆ ಅದು ದೇಶಕ್ಕೆ ಅಪಮಾನಿಸಿದಂತಾಗಲಿದೆ. ಆದ್ದರಿಂದ ಅಂಬೇಡ್ಕರರ ರಾಜಗೃಹದ ಮೇಲೆ ದಾಳಿ ಮಾಡಿದವರನ್ನು ಕೂಡಲೆ ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

ನಂತರ ಕೇಂದ್ರ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಅವರ ಮೂಲಕ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಿವಲಿಂಗಪ್ಪ ಮಾಲಗತ್ತಿ, ಮಹೇಶ ಜಾಲಿಬೆಂಚಿ, ಬಸವರಾಜ ವಾಗಣಗೇರಾ. ದೇವು ಯಡಹಳ್ಳಿ, ದೇವಪ್ಪ ಶಳ್ಳಗಿ, ಪ್ರಬಾಸ ಸದಬ, ಸಿದ್ದು ಯಡಹಳ್ಳಿ, ಮಲ್ಲು ಮುಷ್ಟಳ್ಳಿ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420