ಬಿಸಿ ಬಿಸಿ ಸುದ್ದಿ

ಉತ್ತಮ ಮಳೆ ಬೆಳೆ ಕೊರೊನಾ ನಿರ್ಮೂಲನೆಗೆ ದಂಡಗುಂಡ ಬಸವಣ್ಣಗೆ ಪೂಜೆ

ಸುರಪುರ: ಕಳೆದ ಎರಡು ಮೂರು ವರ್ಷಗಳಿಂದ ನಾಡಿನಲ್ಲಿ ನಿರಂತರವಾಗಿ ಬರಗಾಲ ಆವರಿಸುತ್ತಿದ್ದು ಈ ವರ್ಷ ಉತ್ತಮವಾಗಿ ಮಳೆ ಹಾಗು ಬೆಳೆ ಬಂದು ನಾಡಿನ ಜನರು ಸಂತೋಷದಿಂದ ಬದುಕುವಂತಾಗಲಿ ಹಾಗು ಜಗತ್ತಿಗೆ ಪಿಡುಗಾಗಿ ಬಾಧಿಸುತ್ತಿರುವ ಕೊರೊನಾ ವೈರಸ್ ನಿರ್ಮೂಲನೆಯಾಗಲಿ ಎಂದು ತಾಲೂಕಿನ ಜಾಲಿಬೆಂಚಿ ಗ್ರಾಮದ ಜನರು ಗ್ರಾಮದ ಬೆಟ್ಟದಲ್ಲಿರುವ ದಂಡಗುಂಡ ಬಸವೇಶ್ವರ ದೇವಸ್ಥಾನಕ್ಕೆ ಪರುವು ಮಾಡಿ ಹರಕೆ ಸಲ್ಲಿಸಿದರು.

ಬೆಳಿಗ್ಗೆ ೮ ಗಂಟೆ ಸುಮಾರಿಗೆ ಗ್ರಾಮದ ಎಲ್ಲಾ ಜನರು ತಮ್ಮ ತಮ್ಮ ಮನೆಗಳಲ್ಲಿ ವಿವಿಧ ರೀತಿಯ ಅಡುಗೆ ತಯ್ಯಾರಿಸಿಕೊಂಡು ಭಾಜಾ ಬಜಂತ್ರಿಯೊಂದಿಗೆ ದಂಡಗುಂಡ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಇಡೀ ದಿನ ಭಜನೆ ಮಾಡುತ್ತಾ ದೇವರನ್ನು ಧ್ಯಾನಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಅಮರಯ್ಯಸ್ವಾಮಿ ಮಾತನಾಡಿ,ದಂಡಗುಂಡ ಬಸವೇಶ್ವರನಿಗೆ ಪರುವು ಮಾಡುವ ಸಂಪ್ರದಾಯ ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದು,ನಾಡಿನಲ್ಲಿ ಸರಿಯಾಗಿ ಮಳೆಯಾಗದ ಸಂದರ್ಭದಲ್ಲಿ ಈ ದೇವಸ್ಥಾನಕ್ಕೆ ಬಂದು ಪರುವು ಮಾಡುವುದರಿಂದ ಸಂಜೆ ಮರಳಿ ಮನೆಗೆ ಹೋಗುವಾಗ ಮಳೆ ಬಂದಿರುವ ಉದಾಹರಣೆ ಅನೇಕ ಬಾರಿ ನಡೆದಿದೆ.ಅದರಂತೆ ಈ ವರ್ಷವು ಬಂದಿದ್ದು ನಾಡಿಗೆ ಉತ್ತಮ ಮಳೆ ಬೆಳೆ ದೊರೆಯಲಿ ಹಾಗು ಜಗತ್ತಿಗೆ ಮಹಾ ಮಾರಿಯಾಗಿರುವ ಕೊರೊನಾ ನಿರ್ಮೂಲನೆಯಾಗಲೆಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇಡಿಕೊಂಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಬಸನಗೌಡ ಪೊಲೀಸ್ ಪಾಟೀಲ,ರಾಜಾ ವೆಂಕಟಪ್ಪ ನಾಯಕ ಜಹಾಗಿರದಾರ,ಭೀಮಣ್ಣ ನಾಗನಟಿಗಿ,ಭೀಮಣ್ಣ ಬಿರಾದಾರ್,ರಾಜಾ ನರಸಿಂಹ ನಾಯಕ ಜಹಾಗಿರದಾರ್,ಬಸವರಾಜ ಅಚ್ಚರಡ್ಡಿ,ಶರಣಪ್ಪ ಅಚ್ಚರಡ್ಡಿ,ಅಂಬ್ರೇಶ ಸಾಹುಕಾರ,ಗಂಗಾಧರ ಬಡಿಗೇರ,ಮಾನಪ್ಪ ಚಲುವಾದಿ ಸೇರಿದಂತೆ ಅನೇಕ ಜನರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago