ತ್ರಿಮೂರ್ತಿಗಳ ಅಗಲಿಕೆಯಿಂದ ಸಾಹಿತ್ಯ ಲೋಕ ಬಡವಾಗಿದೆ: ರಾಜಾ ಮದನಗೋಪಾಲ ನಾಯಕ

ಸುರಪುರ: ಕನ್ನಡ ಸಾಹಿತ್ಯಕ್ಕೆ ತಮ್ಮದೆ ಆದ ಕೊಡುಗೆ ನೀಡಿರುವ ಖ್ಯಾತ ಸಾಹಿತಿಗಳಾದ ಎ.ಕೃಷ್ಣಾ ಅರಳಿಗಿಡ,ಗೀತಾ ನಾಗಭೂಷಣ ಹಾಗು ಬಸವರಾಜ ರುಮಾಲ ಅವರ ಅಗಲಿಕೆಯಿಂದ ಸಾಹಿತ್ಯ ಲೋಕ ಬಡವಾಗಿದೆ ಎಂದು ಮಾಜಿ ಸಚಿವ ಹಾಗು ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ರಾಜಾ ಮದನಗೋಪಾಲ ನಾಯಕ ನುಡಿದರು.

ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಂಘ ಸುರಪುರ ವತಿಯಿಂದ ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿಗಳಾದ ಗೀತಾ ನಾಗಭೂಷಣ,ಎ.ಕೃಷ್ಣಾ ಸುರಪುರ ಹಾಗು ಬಸವರಾಜ ರುಮಾಲ ಅವರಿಗೆ ಹಮ್ಮಿಕೊಂಡಿದ್ದ ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಗೀತಾ ನಾಗಭೂಷಣ ಅವರು ಮೊಘಲಾಯಿ ಭಾಷೆಯ ದಿಟ್ಟ ಬರಹಗಾರ್ತಿಯಾಗಿದ್ದರು.ಎ.ಕೃಷ್ಣಾ ಸುರಪುರ ಅವರು ಕನ್ನಡ ಸಾಹಿತ್ಯಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ,ಬಸವರಾಜ ರುಮಾಲ ಅವರು ಸದಾಕಾಲ ನಮ್ಮ ಎಲ್ಲಾ ಸಾಹಿತ್ಯದ ಕಾರ್ಯಕ್ರಮಗಳಿಗೆ ಹಾಜರಿದ್ದು ಮಾರ್ಗದರ್ಶನ ಮಾಡುತ್ತಿದ್ದರು.ಎ.ಕೃಷ್ಣಾ ಅವರ ಹೆಸರಲ್ಲಿ ಒಂದು ಸಂಸ್ಥೆಯನ್ನು ಹುಟ್ಟು ಹಾಕಿ ಸಾಹಿತ್ಯ ಲೋಕಕ್ಕೆ ಕೊಡುಗೆಯನ್ನು ನೀಡುವತ್ತ ಚಿಂತನೆ ನಡೆಸೋಣ ಎಂದರು.

ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಮಾತನಾಡಿ,ಎ.ಕೃಷ್ಣಾ ಮತ್ತು ಬಸವರಾಜ ರುಮಾಲ ಅವರ ನಿಧನ ಗಿದ್ಭ್ರಮೆ ಉಂಟುಮಾಡಿದೆ.ಮುಂದೆ ನಮಗೆ ಮಾರ್ಗದರ್ಶನ ಮಾಡುವವರು ಯಾರೆಂದು ಯೋಚನೆಯಾಗಿದೆ.ಎ.ಕೃಷ್ಣಾ ಅವರು ರವೀಂದ್ರನಾಥ ಠಾಗೋರರ ಗೀತಾಂಜಲಿ ಕನ್ನಡಕ್ಕೆ ಅನುವಾದ ಮಾಡಿದ ಸಾಹಿತ್ಯದ ರತ್ನವಾಗಿದ್ದಾರೆ ಅವರ ಅಗಲಿಕೆ ತುಂಬಾ ನೋವು ಮೂಡಿಸಿದೆ ಎಂದು ಭಾವುಕರಾದರು.

ಸಭೆಯ ಆರಂಭದಲ್ಲಿ ಅಗಲಿದ ಮೂವರು ಸಾಹಿತಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ನಂತರ ವಕೀಲ ನಿಂಗಣ್ಣ ಚಿಂಚೋಡಿ,ಜಯಲಲಿತ ಪಾಟೀಲ,ಬಸವರಾಜ ಜಮದ್ರಖಾನಿ,ಇಕ್ಬಾಲ್ ರಾಹಿ ತಿಮ್ಮಾಪುರ,ಅರ್ಷದ ದಖನಿ,ಪಂಡೀತ ನಿಂಬೂರ ಮಾತನಾಡಿದರು.ಸಾಹಿತಿಗಳಾದ ಹೆಚ್.ರಾಠೋಡ,ಬೀರಣ್ಣ ಆಲ್ದಾಳ ಹಾಗು ನಬಿಲಾಲ ಮಕಾಂದಾರ ಅವರು ಎ.ಕೃಷ್ಣಾರ ಕುರಿತು ಸ್ವರಚಿತ ಕವನಗಳನ್ನು ವಾಚಿಸಿದರು.

ಸಭೆಯಲ್ಲಿ ವಕೀಲ ಬಸವಲಿಂಗಪ್ಪ ಪಾಟೀಲ,ಸೋಮರಡ್ಡಿ ಮಂಗಿಹಾಳ,ಮಲ್ಲೇಶ ಪಾಟೀಲ,ಯಲ್ಲಪ್ಪ ಹುಲಕಲ್,ಪ್ರಕಾಶ ಅಲಬನೂರ,ಮಲ್ಲಿಕಾರ್ಜುನ ಸತ್ಯಂಪೇಟೆ,ರಾಘವೇಂದ್ರ ಭಕ್ರಿ,ವೆಂಕಟೇಶಗೌಡ,ಶರಣಬಸಪ್ಪ ಯಳವಾರ ಇದ್ದರು.ದೇವು ಹೆಬ್ಬಾಳ ನಿರೂಪಿಸಿದರು,ರಾಜಶೇಖರ ದೇಸಾಯಿ ವಂದಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

7 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

10 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

15 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

15 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

17 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420