ಬಿಸಿ ಬಿಸಿ ಸುದ್ದಿ

ಲಾಕ್‌ಡೌನ್ ಧಿಕ್ಕರಿಸಿ ಖರೀದಿಗೆ ಮುಗಿಬಿದ್ದ ಗ್ರಾಹಕರು

ವಾಡಿ: ಜಿಲ್ಲೆಯಾಧ್ಯಂತ ತಲ್ಲಣಿಸಿರುವ ಮಹಾಮಾರಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾಗಿರುವ ಲಾಕ್‌ಡೌನ್ ಆದೇಶಕ್ಕೆ ಜನರು ಕವಡೆಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂಬುದಕ್ಕೆ ವಾರದ ಸಂತೆಯಲ್ಲಿ ಕಂಡುಬಂದ ಜನಜಂಗುಳಿಯೇ ಸಾಕ್ಷಿ ನೀಡಿತು.

ಪಟ್ಟಣದಲ್ಲಿ ನಡೆದ ವಾರದ ಸಂತೆಯಲ್ಲಿ ಮುಗಿಬಿದ್ದು ತರಕಾರಿ ಖರೀದಿಗೆ ನೂಕುನುಗ್ಗಲು ನಡೆಸುವ ಮೂಲಕ ಗ್ರಾಹಕರು ಸಾಕ್ರಾಮಿಕ ರೋಗದ ಸಾಮಾಜಿಕ ಅಂತರ ಧಿಕ್ಕರಿಸಿದ ದೃಶ್ಯಗಳು ಕಂಡು ಬಂದವು. ರಸ್ತೆಗಳಲ್ಲಿ ಬೈಕ್ ಸವಾರರ ಸಂಚಾರ ಸಾಮಾನ್ಯವಾಗಿತ್ತು. ತರಕಾರಿ, ಹಣ್ಣು, ದಿನಸಿ ಅಂಗಡಿಗಳ ಮುಂದೆ ಗ್ರಾಹಕರು ಸುತ್ತುವರೆದು ಸಿಗುತ್ತೋ ಇಲ್ಲವೋ ಎಂಬಂತೆ ಖರೀದಿಯಲ್ಲಿ ತೊಡಗಿದ್ದರು, ಪ್ರಮುಖ ವೃತ್ತಗಳಲ್ಲಿ ಗುಂಪು ಗುಂಪಾಗಿ ನಿಂತು ಹರಟೆ ಹೊಡೆಯುವವರ ಗ್ಯಾಂಗ್ ನಿರ್ಭಯವಾಗಿ ಸಮಯ ಕಳೆಯುತ್ತಿತ್ತು. ಜನದಟ್ಟಣೆ ಕಂಡರೂ ನಮಗೇನು ಸಂಬಂದವಿಲ್ಲದಂತೆ ವೀಕ್ಷಿಸುತ್ತಿದ್ದ ಪೊಲೀಸರು, ಹಲ್ಲುಕಿತ್ತ ಹಾವಿನಂತೆ ಅಸಹಾಯಕತೆ ಪ್ರದರ್ಶಿಸಿದರು. ಇದನ್ನೆಲ್ಲ ನೋಡಿದ ಪ್ರಾಣಕಂಟಕ ಕೊರೊನಾ ಸೋಂಕು ಒಳಗೊಳಗೆ ಕೇಕೆಹಾಕಿ ನಕ್ಕಿರಬೇಕು..!

ಕಠಿಣ ಲಾಕ್‌ಡೌನ್ ದಿನಗಳಲ್ಲಿ ತಿವ್ರ ಸಂಕಷ್ಟದ ದಿನಗಳನ್ನು ಅನುಭವಿಸಿದ ಸ್ಥಳೀಯರಿಗೆ ಈ ಬಾರಿ ಜಾರಿಯಾದ ಲಾಕ್‌ಡೌನ್ ಬಿಸಿ ಮುಟ್ಟಿಸುವಲ್ಲಿ ವಿಫಲಗೊಂಡಿತು. ವಾರದ ಸಂತೆ ರದ್ದುಪಡಿಸಲಾಗಿದೆ ಎಂದು ಪುರಸಭೆ ಅಧಿಕಾರಿಗಳು ಪ್ರಚಾರ ಮಾಡಿದ್ದರೂ ಗುರುವಾರ ಭರ್ಜರಿ ಸಂತೆ ನಡೆಯಿತು. ಅಧಿಕಾರಿಗಳ ಆದೇಶವು ಗ್ರಾಮೀಣ ಭಾಗದ ತರಕಾರಿ ಬೆಳೆಗಾರರನ್ನು ಹಾಗೂ ಬಡ ವ್ಯಾಪಾರಿಗಳನ್ನು ಸಂತೆಯಿಂದ ಹೊರಗಿಟ್ಟು ಸ್ಥಳೀಯ ವ್ಯಾಪಾರಿಗಳಿಗೆ ಲಾಭ ತಂದುಕೊಟ್ಟಿತು.

ಒಬ್ಬ ಕಾರ್ಮಿಕನಿಗೆ ಸೋಂಕು ದೃಢಪಟ್ಟ ಎಸಿಸಿ ಕಾರ್ಮಿಕರ ಕಾಲೋನಿಯಲ್ಲಿ ಗುರುವಾರ ತರಕಾರಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಸೋಂಕಿನ ಭಯವಿಲ್ಲದೆ ಕಾರ್ಮಿಕರು ಮುಗಿಬಿದ್ದು ತರಕಾರಿ ಖರೀಸಿದರು. ಮಾಸ್ಕ್ ಧರಿಸದೆ ಮತ್ತು ಪರಸ್ಪತ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದು, ಲಾಕ್‌ಡೌನ್ ಆದೇಶವನ್ನೇ ಅಣಕಿಸುವಂತೆ ಮಾಡಿತು. ಜನಜೀವನ ಸಹಜವಿದ್ದ ನಗರದಲ್ಲಿ ಲಾಕ್‌ಡೌನ್ ನಾಮಕೆವಾಸ್ತೆ ಎಂಬಂತಿದೆ ಎಂದು ಜನರೇ ಆಡಿಕೊಂಡು ಆಡಳಿತವನ್ನು ಟೀಕಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago