ಕಲಬುರಗಿ: ಜಿಲ್ಲೆಯಾದ್ಯಂತ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮನೆ, ದೇವಸ್ಥಾನ, ಕಲ್ಯಾಣ ಮಂಟಪದಲ್ಲಿ ಮದುವೆ, ಸೀಮಂತ ಸೇರಿದಂತೆ ಜನ ಸೇರಿವ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದು, ಅದರಂತೆ ತಾಲೂಕಿನಲ್ಲಿ ಈ ರೀತಿಯ ಎಲ್ಲಾ ಚಟವಟಿಕೆಳನ್ನು ನಿಷೇಧಿಸಲಾಗಿದೆ ಎಂದು ಆಳಂದ ತಹಶೀಲ್ದಾರ ದಯಾನಂದ ಪಾಟೀಲ ತಿಳಿಸಿದ್ದಾರೆ.
ಸಾರ್ವಜನಿಕರು ಅನಗತ್ಯ ಹೊರಗಡೆ ಸಂಚರಿಸಿ ಜನಸಂದಣಿ ಪ್ರದೇಶದಲ್ಲಿ ಸೇರಿ ಮನೆಗೆ ಮರಳಿದಾಗ ಮನೆಯಲ್ಲಿರುವ ವಯಸ್ಕರು ಮತ್ತು ದೀರ್ಘಕಾಲದಿಂದ ರೋಗಕ್ಕೆ ತುತ್ತಾದವರು ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಸಾರ್ವಜನಿಕರು ಸೇರುವ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
ಒಂದು ವೇಳೆ ಯಾರಾದರು ತಾಲೂಕಿನಲ್ಲಿ ಮದುವೆ, ಸೀಮಂತ ಹಾಗೂ ಜನಸೇರುವ ಕಾರ್ಯಕ್ರಮ ನಡೆಸಿದಲ್ಲಿ ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಇದಕ್ಕೆ ಸಂಬಂಧಿಸಿದ ಆಯಾ ಹೋಬಳಿಯ ಉಪ ತಹಶೀಲ್ದಾರ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿ.ಡಿ.ಓ. ಹಾಗೂ ಆರಕ್ಷಕ ಉಪ ನಿರೀಕ್ಷಕರನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…