ಬಿಸಿ ಬಿಸಿ ಸುದ್ದಿ

ವಿದ್ಯುತ್ ತಗುಲಿ ಬಾಲಕ ಮತ್ತು ಆಕಳ ಸಾವು

ವಿದ್ಯುತ್ ತಗುಲಿ ಬಾಲಕ ಮತ್ತು ಆಕಳ ಸಾವು

ಶಹಾಬಾದ:ತಾಲೂಕಿನ ವ್ಯಾಪ್ತಿಯ ಶಂಕರವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 150 ರ ಪಕ್ಕದಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ಆಕಳಿಗೆ ತಗುಲಿ ಆಕಳು ಮೃತ ಪಟ್ಟಿದ್ದು, ಆಕಳನ್ನು ಉಳಿಸಲು ಹೋದ ದನಗಾಯಿ ಬಾಲಕನು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಕಳುಗಳನ್ನು ಮೇಯಿಸಲು ಹೊರಟಿದ್ದ ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಹೆದ್ದಾರಿ ಪಕ್ಕದ ರಘೋಜಿ ಕಾರ್ಖಾನೆ ಕಂಪೌಂಡ ಗೋಡೆಯ ಬಳಿ ಮುಳ್ಳು ಕಂಟಿಗಳ ನಡುವೆ ಹೋದ ಆಕಳು, ಕಾಖರ್ಾನೆಗೆ ವಿದ್ಯುತ್ ಸರಬರಾಜು ಮಾಡುವ ಹೈಟೆನಕ್ಷನ್ ವಿದ್ಯುತ್ ತಂತಿ ಕಡಿದು ಬಿದ್ದಿದ್ದರಿಂದ ವಿದ್ಯುತ್ ತಗುಲಿ ಒದ್ದಾಡುತ್ತಿರುವದನ್ನು ಕಂಡ ಬಿರಣ್ಣಾ ಕೂಡಲೇ ಆಕಳನ್ನು ಉಳಿಸಿಕೊಳ್ಳಲು ಹೋಗಿ, ಆತನಿಗೂ ವಿದ್ಯುತ್ ತಗುಲಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ವಿಷಯ ತಿಳಿದ ಡಿವೈಎಸ್ಪಿ ವೆಂಕಣ್ಣಗೌಡ ಪಾಟೀಲ, ಪಿಐ ಬಿ.ಅಮರೇಶ, ಜೆಸ್ಕಾಂ ಎಇಇ ಸೈಯದ್ ಅನ್ವರ, ಸೆಕ್ಷನ್ ಅಧಿಕಾರಿ ಸಿದ್ದಪ್ಪ ಹಂಚನಾಳ, ಜೆಸ್ಕಾಂ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಾಶೀನಾಥ ದೇವರ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ, ವಿದ್ಯುತ್ ಸರಬರಾಜು ಕಡಿತಗೊಳಿಸಿ ಮೃತ ಬಾಲಕನನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸಕರ್ಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಕರಣವನ್ನು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಪರಿಹಾರಕ್ಕೆ ಒತ್ತಾಯ: ಶಂಕರವಾಡಿ ಗ್ರಾಮದ ಬಾಲಕ ಭೀರಣ್ಣ ಕಡಿದು ಬಿದ್ದ ವಿದ್ಯುತ್ ತಂತಿಗೆ ಆಕಳು ದೇಹ ತಗುಲಿ ಒದ್ದಾಡುತ್ತಿರುವುದನ್ನು ಗಮನಿಸಿ, ಉಳಿಸಲು ಹೋಗಿ ತಾನಿ ವಿದ್ಯುತ್ ತಂತಿಗೆ ಬಲಿಯಾಗಿದ್ದಾನೆ.ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ ಬಾಲಕ ಹಾಗೂ ಆಕಳ ಸಾವು ಸಂಭವಿಸಿದ್ದು, ಮೃತ ಬಾಲಕನ ಮನೆಯವರಿಗೆ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಮುಖಂಡ ರಾಜೇಶ ಯನಗುಂಟಿಕರ್, ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ರಾಯಪ್ಪ ಹುರಮುಂಜಿ ಆಗ್ರಹಿಸಿದ್ದಾರೆ.

emedia line

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

52 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

55 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

57 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago