ಉಗ್ರ ರೂಪ ತಾಳಲಿದೆ ಆಶಾ ಕಾರ್ಯಕರ್ತೆಯರ ಹೋರಾಟ: ಹತ್ತು ದಿನ ಪೂರ್ಣಗೊಳಿಸಿದ ಮುಷ್ಕರ

ವಾಡಿ: ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಕಳೆದ ಹನ್ನೊಂದು ದಿನಗಳಿಂದ ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಕರೆಕೊಟ್ಟು ಹೋರಾಟದಲ್ಲಿದ್ದಾರೆ. ಕೊರೊನಾ ವಾರಿಯರ್ಸ್‌ಗಳ ಕೂಗು ಕೇಳಿಸಿಕೊಳ್ಳದ ಸರಕಾರದ ವಿರುದ್ಧ ಉಗ್ರ ಹೋರಾಟ ಭುಗಿಲೇಳಲಿದೆ ಎಂದು ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಜಂಟಿ ಕಾರ್ಯದರ್ಶಿ ಶರಣು ಹೇರೂರ ಹೇಳಿದರು.

ಗೌರವಧನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳಿಗಾಗಿ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಜು.೧೦ ರಿಂದ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಕಾಲ ಮುಷ್ಕರಕ್ಕೆ ಕರೆ ನೀಡಿರುವ ಆಶಾ ಕಾರ್ಯಕರ್ತೆಯರ ಹೋರಾಟ ಮುಂದುವರೆಸುವ ಕುರಿತು ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರೆಯಲಾದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಒಟ್ಟು ೪೨೦೦೦ ಆಶಾ ಕಾರ್ಯಕರ್ತೆಯರು ರೂ.೧೨೦೦೦ ಗೌರವಧನ ಹೆಚ್ಚಳಕ್ಕಾಗಿ ಹೋರಾಡುತ್ತಿದ್ದಾರೆ. ಮುಷ್ಕರ ಹನ್ನೊಂದನೇ ದಿನಕ್ಕೆ ಕಾಲಿಟ್ಟರೂ ಕಿವುಡ ಸರಕಾರ ಕ್ಯಾರೆ ಎನ್ನುತ್ತಿಲ್ಲ. ಹಗಲೂ ರಾತ್ರಿ ಸೋಂಕಿತರ ಮಧ್ಯೆ ಕರ್ತವ್ಯ ನಿರ್ವಹಿಸಿದ ಕೊರೊನಾ ವಾರಿಯರ್ಸ್‌ಗಳ ಸೇವೆಯನ್ನು ಸರಕಾರ ಹಗುರವಾಗಿ ಕಂಡಿದೆ ಎಂದು ದೂರಿದರು. ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ನೀಡುತ್ತಿರುವ ಗೌರವಧನ ಮತ್ತು ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಲು ಆಶಾಗಳು ಸಾಕಷ್ಟು ಹರಸಾಹಸ ಪಡಬೇಕಿದೆ. ಈ ಎರಡೂ ಗೌರವಧನಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.೧೨೦೦೦ ನಿಶ್ಚಿತ ಗೌರವಧನ ನಿಗದಿಪಡಿಸಬೇಕು ಹಾಗೂ ಆರೋಗ್ಯ ರಕ್ಷಣೆಗೆ ರಕ್ಷಾಕವಚ ಒದಗಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ರೈತರು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ಮಹಿಳೆಯರು, ಕಾರ್ಮಿಕರು, ಬುದ್ದಿಜೀವಿಗಳು ನಮ್ಮ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ ಎಂದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಚಿತ್ತಾಪುರ ತಾಲೂಕು ಕಾರ್ಯದರ್ಶಿ ಸಾವಿತ್ರಿ ಬೆಟಗೇರಿ ಮಾತನಾಡಿ, ಸರ್ಕಾರ ನಮ್ಮ ಕಷ್ಟದ ಕೂಗು ಕೇಳಿಸಿಕೊಳ್ಳದಿದ್ರೆ ಕುಟುಂಬ ಸಮೇತ ರಾಜ್ಯದಾದ್ಯಂತ ನಮ್ಮೂರ ಪಂಚಾಯತಿಗಳ ಮುಂದೆ ಧರಣಿ ಆರಂಭಿಸುತ್ತೇವೆ. ಜೀವದ ಹಂಗು ತೊರೆದು ಕೊರೊನಾ ಹೋರಾಟದಲ್ಲಿ ತೊಡಗಿರುವ ನಮಗೆ ನ್ಯಾಯ ಸಿಗುವ ವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಗುಡುಗಿದರು.
ಆಶಾ ಕಾರ್ಯಕರ್ತೆಯರಾದ ಮಂಜುಳಾ ಚಾಮನೂರ, ವಿಜುಬಾಯಿ ರಾಠೋಡ, ರತ್ನಮ್ಮ ಕಟ್ಟಿಮನಿ, ಸಾವಿತ್ರಿ ಹಂಗರಗಿ, ರೇಣುಕಾ ಕಟ್ಟಿಮನಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

41 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

1 hour ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420