ಅನಾರೋಗ್ಯದಿಂದ ವ್ಯಕ್ತಿ ಸಾವು ಕೊರೊನಾ ಶಂಕೆ

0
39

ಶಹಾಪುರ: ತಾಲೂಕಿನ ರಸ್ತಾಪುರ ಗ್ರಾಮದ ವ್ಯಕ್ತಿ ಅನಾರೋಗ್ಯದಿಂದ ಕಲಬುರಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿರುವುದರಿಂದ ಕೊರೊನಾ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ಈ ವ್ಯಕ್ತಿಗೆ ಹೃದಯ ಸಂಬಂಧಿ, ಪಾರ್ಶ್ವವಾಯು, ಹಾಗೂ ಸಕ್ಕರೆ ಕಾಯಿಲೆ ಇನ್ನಿತರ ರೋಗಗಳಿಂದ ಬಳಲುತ್ತಿದ್ದ ಸಲುವಾಗಿ ಚಿಕಿತ್ಸೆಗಾಗಿ ಕಲಬುರಗಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಕ್ಕಿಂತ ಪೂರ್ವದಲ್ಲಿ ಕೊರೊನಾ ಟೆಸ್ಟ್ಗೆ ಕಳುಹಿಸಲಾಗಿತ್ತು.ಇನ್ನು ವರದಿ ಬಾರದ ಕಾರಣಕ್ಕಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

Contact Your\'s Advertisement; 9902492681

ಕೋವಿಡ್ -19 ನಿಯಮಾವಳಿಗಳ ಪ್ರಕಾರ ಮೃತ ವ್ಯಕ್ತಿಯನ್ನು ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ, ಕುಟುಂಬದ ಎಲ್ಲಾ ಸದಸ್ಯರ ಗಂಟಲು ದ್ರವ ಟೆಸ್ಟ್ಗೆ ಕಳುಹಿಸಲಾಗುವುದು ಎಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿಯಾದ ಡಾ. ರಮೇಶ ಗುತ್ತೇದಾರ ತಿಳಿಸಿದ್ದಾರೆ.

ವ್ಯಕ್ತಿ ಮೃತಪಟ್ಟಿರುವ ಬಡಾವಣೆಯನ್ನು ಸಂಪೂರ್ಣವಾಗಿ ಸೆಲ್ ಡೌನ್ ಮಾಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here