ಕಲಬುರಗಿ: ವೆಂಟಿಲೇಟರ್ ಸಿಗದೆ, ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಓರ್ವರು ಸಾವನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಹೊನ್ನಕಿರಣಗಿ ಗ್ರಾಮದ ನಿವಾಸಿಯಾದ ಅಕ್ಕನಾಗಮ್ಮ (50) ಸಾವನ್ನಪ್ಪಿರುವ ಮಹಿಳೆ, ಲೋ ಬಿಪಿ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಕ್ಕನಾಗಮ್ಮ . ನಿನ್ನೆ ರಾತ್ರಿ 2 ಗಂಟೆಯಿಂದ ವೆಂಟಿಲೇಟರ್ ಗಾಗಿ ಕುಟುಂಬಸ್ಥರು ಪರದಾಡಿದರು ಎಂದು ತಿಳಿದುಬಂದಿದೆ.
ಜಿಮ್ಸ್, ಇಎಸ್ ಐ, ಸೇರಿದಂತೆ ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಕೊನೆಗೆ ಇಂದು ಹೈದ್ರಾಬಾದಿಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ವೆಂಟಿಲೇಟರ ಸಿಗದೆ ಮಹಿಳೆ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆಸ್ಪತ್ರೆಗೆ ಭೇಟಿನೀಡಿದ ರೈತ ಸಂಘಟನೆ, ಸಿಪಿಐಎಂ ಜಿಲ್ಲಾ ಮುಖಂಡರಾದ ಮಾರುತಿ ಮಾನ್ಪಡೆ ಮಾತನಾಡಿ ಕೊರೊನಾ ವಾರಿಯರ್ಸ್ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಗೆ ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ವೆಂಟಿಲೇಟರ್ ಕೊರತೆಯಿಂದ ಜನರು ಮೃತಪಟ್ಟುತಿದ್ದಾರೆ.
ಕಲಬುರಗಿಯಲ್ಲಿ ಈ ಹಿಂದೆ ವೆಂಟಿಲೇಟರ್ ಕೊರೆತೆಯ ಬಗ್ಗೆ ಜಿಲ್ಲಾ ಉಸ್ತುವಾರಿ ನೇತೃತ್ವದಲ್ಲಿ ನಡೆದ ಕೊರೊನಾ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆಯಲ್ಲಿ ಈ ವಿಷಯದ ಕುರಿತು ಉಸ್ತುವಾರಿ ಸಚಿವ ಮತ್ತು ಮಾನ್ಪಡೆ ಅವರ ಮದ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕಾರಜೋಳ ಅವರನ್ನು ಸಭೆಯಿಂದ ಹೊರಗಟ್ಟಿದರು.
ಈ ಕುರಿತು ಸರಕಾರ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ ಕಾರಣ ಜಿಲ್ಲೆಯಲ್ಲಿ ಚಿಕಿತ್ಸೆ ಇಲ್ಲದ ಜನರು ಪ್ರಾಣ ಬಿಡುವಂತಹದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ: ಅಪ್ಪ- ಅವ್ವ, ಹೆಂಡತಿ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಬಹುದು. ಆದರೆ ಅಕ್ಕ ತಂಗಿಯ ಸ್ಮರಣೆಯಲ್ಲಿ ಟ್ರಸ್ಟ್ ಸ್ಥಾಪಿಸುವುದು ಬಹಳ ಅಪರೂಪ…
ಕಲಬುರಗಿ: ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ರಾಜ್ಯಾಧ್ಯಕ್ಷ ಡಾ. ಸಿದ್ದನಗೌಡ…
ವಾಡಿ: ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು…
ಕಲಬುರಗಿ; ಬಸವರಾಜ್ ಎಸ್ ಜಿಳ್ಳೆ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…
ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್ಎಸ್ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…