ಜೇವರ್ಗಿಯಲ್ಲಿ ಭಾರಿ ಮಳೆ : ಜಲಾವೃತವಾದ ತಹಸಿಲ್ದಾರರ ಕಾರ್ಯಾಲಯ

ಜೇವರ್ಗಿ : ನಿನ್ನೆ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಜೇವರ್ಗಿ ನಾಗರಿಕರು ಸಂಕಷ್ಟವನ್ನು ಎದುರಿಸುವ ಸ್ಥಿತಿಯಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಯಿತು .ಇಲ್ಲಿನ ತಾಲೂಕು ಕಚೇರಿಗಳ ಸಂಕೀರ್ಣವಾದ ತಹಸಿಲ್ದಾರರ ಕಾರ್ಯಾಲಯ ಅಕ್ಷರಸಹ ನಡು ಗಡ್ಡೆಯಾಗಿ ಗೋಚರವಾಗುತ್ತಿತ್ತು.

ತಸಿಲ್ದಾರ್ ಸೇರಿದಂತೆ ಇತರರು ನಿಲ್ಲಿಸಿದ ವಾಹನಗಳು ಅರ್ಧ ಮುಳುಗಿ ಹೋಗಿ ಅಲ್ಲಿಂದ ಕದಲಿಸಿದ ,ತೆಗೆಯಲು ಬಾರದೆ ಇರುವ ಪರಿಸ್ಥಿತಿಯನ್ನು ತಲುಪಿದವು.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಖ್ಯ ರಸ್ತೆ ಸೇರಿದಂತೆ ತಃಸಿಲ್ ಕಾರ್ಯಾಲಯಕ್ಕೆ ಸಂಪರ್ಕವನ್ನು ಹೊಂದಿಸುವ ರಸ್ತೆಗಳು ಮೊಳಕಾಲಿನ ವರೆಗೂ ನೀರು ತುಂಬಿಕೊಂಡು ಜನಸಂಚಾರಕ್ಕೆ ಭಾರಿ ತಡೆ ಉಂಟು ಮಾಡಿತು.

ದ್ವಿಚಕ್ರ ವಾಹನ ಸವಾರರು ತಹಸಿಲ್ ಕಾರ್ಯಲಯದ ಮುಖ್ಯ ರಸ್ತೆ ಮೇಲೆ ಸಂಚರಿಸಲು ಹರಸಾಹಸ ಪಡುವಂತೆ ಪರಿಸ್ಥಿತಿ ನಿರ್ಮಾಣವಾಯಿತು. ಮಧ್ಯಾಹ್ನ ಜನಸಂಚಾರ ಕಡಿಮೆ ಇದ್ದರೂ ಸಹ ಅಗತ್ಯ ಕೆಲಸಗಳಿಗಾಗಿ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೇರಿದಂತೆ ಆಹಾರ ನಿರೀಕ್ಷಕರು ಹಾಗೂ ಉಪನೊಂದಣಾಧಿಕಾರಿಗಳು ಇತರ ಕಚೇರಿಗಳಿಗೆ ಬರುವ ಜನರಿಗೆ ಈ ಮಳೆಯು ಕಿರಿಕಿರಿಯನ್ನುಂಟುಮಾಡಿದೆ.

ಅಲ್ಲದೆ ತಹಸಿಲ್ ಕಾರ್ಯಾಲಯದ ಎದುರು ಇರುವ ಬಡಾವಣೆಗಳಲ್ಲಿ ನೀರು ತುಂಬಿಕೊಂಡು ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಕಾರಣ ಜನ ಹಾಗೂ ವಾಹನಗಳ ಸಂಚಾರಕ್ಕೆ ತಡೆ ಉಂಟು ಮಾಡುವಂತೆ ಗೋಚರವಾಯಿತು‌.

ಪ್ರತಿ ವರ್ಷಕ್ಕಿಂತ ಈ ವರ್ಷ ಮಳೆ ಪ್ರಮಾಣವು ಹೆಚ್ಚಾಗಿದ್ದು ಹಳ್ಳಿಗಳಲ್ಲಿನ ಜನರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಸಹಾಯಕವಾಗಿರುವುದು, ಆದರೆ ಅನಿರೀಕ್ಷಿತ ಬಿಟ್ಟು ಬಿಡದೆ ಸುರಿಯುವ ಮಳೆಯು ನಗರ ಪ್ರದೇಶದ ಜನರ ಜೀವನಕ್ಕೆ ದಿನನಿತ್ಯದ ವ್ಯವಹಾರಗಳಿಗೆ ವಹಿವಾಟುಗಳಿಗೆ ತೊಂದರೆ ಉಂಟು ಮಾಡುತ್ತಿರುವುದು ಕಂಡುಬಂದಿತು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

3 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

4 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

6 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

17 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

19 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420