ಕಲಬುರಗಿ: ಜಿಲ್ಲೆಯಲ್ಲಿ ವೆಂಟಿಲೇಟರ್ ಕೊರತೆಯಿಂದ ಅಂಗನವಾಡಿ ಕಾರ್ಯಕರ್ತೆ ಓರ್ವರು ಮೃತಪಟ್ಟ ಬೆನ್ನಲ್ಲೇ, ಈಗ ಮತ್ತೊಬ್ಬರು ಮೃತಪಟ್ಟಿರುವ ಅರೋಪಗಳು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಕಳೆದೆರಡು ದಿನಗಳಿಂದ ಮೃತಪಟ್ಟವರಲ್ಲಿ ಬಹುತೇಕರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದವರೇ ಎಂಬ ಆರೋಪ ಜಿಲ್ಲೆಯಲ್ಲಿ ದಟ್ಟವಾಗಿ ಕೇಳಿಬರುತ್ತಿದೆ.
ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆ ಅಕ್ಕನಾಗಮ್ಮ ಅವರಿಗೆ ಸಕಾಲಕ್ಕೆ ವೆಂಟಿಲೇಟರ್ ವ್ಯವಸ್ಥೆ ಸಿಗದಿದ್ದಕ್ಕೆ ಮೃತಪಟ್ಟಿದ್ದಾರೆ ಎಂಬ ಆರೋಪಕ್ಕೆ ಇ.ಎಸ್.ಐ.ಸಿ ಮತ್ತು ಜಿಮ್ಸ್ ವೆಂಟಿಲೇಟರ್ ಕಾರಣದಿಂದ ಮೃತಪಟ್ಟಿಲ್ಲ ಎಂದು ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು.
ಆದರೆ ಈ ನಡುವೆ ನಿನ್ನೆ ಅಫಜಲಪುರ ಪಟ್ಟಣದ ಶಿಕ್ಷಕ ಬಸವರಾಜ ಪದಕಿ ಎಂಬುವರು ಇಂತಹುದೇ ಸಮಸ್ಯೆಯಿಂದಾಗಿ ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ.
ಮೃತರ ಗಂಟಲು ದ್ರವ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದಲ್ಲದೇ ನಿನ್ನೆ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ವೃದ್ಧೆಯ ಸಾವಿಗೂ ವೆಂಟಿಲೇಟರ್ ಕೊರತೆಯೇ ಕಾರಣ ಎಂದು ಮಗ ದೂರಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕೂಡಾ ಈ ಬಗ್ಗೆ ಟ್ವೀಟ್ ಮಾಡಿ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಜಿಲ್ಲಾಡಳಿತ ಆಕ್ಸಿಜನ್ ಅಥವಾ ವೆಂಟಿಲೇಟರ್ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದೆ. ಆದರೆ, ಮೃತರ ಸಂಬಂಧಿಕರು ಮಾತ್ರ ಆಕ್ಸಿಜನ್, ವೆಂಟಿಲೇಟರ್ ಕೊರತೆಯಿಂದಲೇ ತಮ್ಮವರನ್ನು ಕಳೆದುಕೊಂಡಿರುವುದಾಗಿ ಆರೋಪಗಳು ಮಾಡುತ್ತಿದ್ದಾರೆ.
ಕೊರೊನಾ ಮಹಾಮಾರಿಗೆ ಸಂದರ್ಭದಲ್ಲಿ ಆತಂಕ ಒಳಗಾಗಿದ್ದ ಜನರಿಗೆ ಈ ಘಟನೆಗಳು ಮತ್ತಷ್ಟು ಆತಂಕದ ಸುಳಿವಿಗೆ ಸಿಲುಕುವಂತ ಮಾಡಿದೆ.
ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯವೈಖರಿ ಮತ್ತು ಜಿಲ್ಲಾಡಳಿತ ಹೇಳಿಕೆಗಳ ಬಗ್ಗೆ ಜನರಲ್ಲಿ ಹಲವು ಅನುಮಾನ ಹಾಗೂ ಸಂಶಯ ಸೃಷ್ಠಿಸುವಂತಾಗಿದೆ.
ಈ ಬಗ್ಗೆ ರಾಜ್ಯ ಸರಕಾರ ಗಮನಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಅನ್ನೋದು ಜಿಲ್ಲೆಯ ಜನರ ಆಗ್ರಹವಾಗಿದೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…