ಕಲಬುರಗಿ: ಸುಮಾರು ದಶಕಗಳ ಹೋರಾಟ ಹಾಗೂ ಬಲಿದಾನಗಳ ಪ್ರತಿಫಲವಾಗಿ ಇಂದು ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ರಾಮ ಮಂದಿರದ ಶಿಲಾನ್ಯಾಸ ಆಗಸ್ಟ್ ೫ ರಂದು ಅಯೋಧ್ಯೆಯಲ್ಲಿ ನೆರವೇರಿಸಲಾಗುತ್ತಿರುವುದು. ಈ ಪ್ರಯುಕ್ತ ವಿಶ್ವದ ಮೂಲೆ ಮೂಲೆಗಳಿಂದ ಪವಿತ್ರ ಮಣ್ಣು ಹಾಗೂ ಪವಿತ್ರ ಜಲ ಸಂಗ್ರಹಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ವತಿಯಿಂದ ಇಂದು ಜಿಲ್ಲೆಯ ಪವಿತ್ರ ಸ್ಥಳಗಳಾದ ಶ್ರೀ ಶರಣಬಸವೇಶ್ವರ ದೇವಸ್ಥಾನ, ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನ, ಕಾಳಗಿಯ ಕಾಲೇಶ್ವರ ದೇವಸ್ಥಾನ, ಕಲಬುರಗಿ ಯ ರಾಮತೀರ್ಥ್, ಕಮಲಾಪುರದ ರಾಮತೀರ್ಥ್, ನರೊಣಾದ ಕ್ಷೇಮಲಿಂಗೇಶ್ವರ ದೇವಸ್ಥಾನ, ಹಿಪ್ಪರಗಾದ ರಾಮಲಿಂಗೇಶ್ವರ ದೇವಸ್ಥಾನ ಗಳಿಂದ ಸಂಗ್ರಹಿಸಲಾದ ಪವಿತ್ರ ಮಣ್ಣು ( ಮೃತ್ತಿಕೆ) ಹಾಗೂ ಪವಿತ್ರ ಜಲ ಅಯೋಧ್ಯೆಗೆ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂಜಿಸಿ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ವಿ. ಹಿಂ.ಪ ಗೌರವಾಧ್ಯಕ್ಷ ಲಿಂಗರಾಜಪ್ಪ ಅಪ್ಪ, ಸುಭಾಷ್ ಕಾಂಬಳೆ ಸುರೇಶ್ ಹೇರೂರ್, ಶೇಷಾದ್ರಿ ಕುಲಕರ್ಣಿ, ಶಿವರಾಜ್ ಸಂಗೋಳಗಿ, ಸಾಗರ್ ರಾಥೋಡ್ ಹಿಂದೂ, ಶಾಂತು ಬಿರಾದಾರ್, ಅಶ್ವಿನ್ಕುಮಾರ್ ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…