ಬಿಸಿ ಬಿಸಿ ಸುದ್ದಿ

ಜೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಕಂಬಕ್ಕೆ ದೇಣಿಗೆ ಸಂಗ್ರಹ!

ವಾಡಿ: ಬಡಾವಣೆಯಲ್ಲಿ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸಿದ ಜೆಸ್ಕಾಂ ಅಧಿಕಾರಿಗಳ ವರ್ತನೆಗೆ ಬೇಸತ್ತ ಸಾರ್ವಜನಿಕರು, ತಾವುಗಳೇ ದೇಣಿಗೆ ಸಂಗ್ರಹಿಸಿ ತಾತ್ಕಾಲಿಕ ಕಂಬಗಳನ್ನು ಅಳವಡಿಸಿಕೊಳ್ಳುವ ಮೂಲಕ ಮನೆಗೆ ಬೆಳಕು ಕಂಡಿದ್ದಾರೆ.

ಪಟ್ಟಣದ ಸೋನಾಬಾಯಿ ಏರಿಯಾದ ಬಸವೇಶ್ವರ ಶಾಲೆ ಹತ್ತಿರದ ಹೊಸ ಬಡಾವಣೆ ಹತ್ತಾರು ಮನೆಯ ಕುಟುಂಬಗಳು ವಿದ್ಯುತ್ ಸೌಕರ್ಯದಿಂದ ವಂಚಿತರಾಗಿದ್ದರು. ವಿದ್ಯುತ್ ಕಂಬ ಅಳವಡಿಸಿ ಬೆಳಕಿನ ಸೌಲಭ್ಯ ಒದಗಿಸಬೇಕು ಎಂದು ಸ್ಥಳೀಯ ಜೆಸ್ಕಾಂ ಅಧಿಕಾರಿಗಳಿಗೆ ಬಡಾವಣೆಯ ನಿವಾಸಿಗಳು ವರ್ಷದ ಹಿಂದೆಯೇ ಮನವಿಪತ್ರ ಕೊಟ್ಟು ಬೇಸರಗೊಂಡಿದ್ದರು. ಇಂದು ನಾಳೆ ಎನ್ನುತ್ತಲೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.

ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಇತರ ಅಗತ್ಯತೆಗಳಿಗಾಗಿ ವಿದ್ಯುತ್ ಕೊರತೆ ಎದುರಿಸಿದ ಇಲ್ಲಿನ ಜನರು, ಪ್ರತಿಯೊಬ್ಬರಿಂದ ದೇಣಿಗೆ ಸಂಗ್ರಹಿಸಿ ಸುಮಾರು 30.000 ರೂ. ವೆಚ್ಚದಲ್ಲಿ ಐದು ಕಬ್ಬಿಣದ ತಾತ್ಕಾಲಿಕ ಕಂಬಗಳನ್ನು ಖರೀದಿಸಿ ನೆಲದಡಿ ಹೂಳುವ ಮೂಲಕ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ.

ನಿಗದಿಪಡಿಸಿದ ಶುಲ್ಕ ಪಾವತಿಸುತ್ತೇವೆ ಎಂದರೂ ಅಧಿಕಾರಿಗಳು ನಮ್ಮ ಗೋಳು ಕೇಳಲಿಲ್ಲ. ಕತ್ತಲು ಮನೆಯಲ್ಲಿ ಜೀವನ ನಡೆಸುವುದು ಕಷ್ಟಕರವಾಯಿತು. ಎರಡು ವಿದ್ಯುತ್ ಕಂಬಗಳಿಗಾಗಿ ಬೇಡಿಕೆಯಿಟ್ಟು ಒಂದು ವರ್ಷದಿಂದ ಜೆಸ್ಕಾಂ ಕಚೇರಿಗೆ ಅಲೆದು ಅರ್ಜಿ ಕೊಟ್ಟರೂ ಕ್ಯಾರೆ ಎನ್ನಲಿಲ್ಲ. ಪರಿಣಾಮ ನಾವುಗಳೇ ಹಣ ಕ್ರೂಡೀಕರಿಸಿ ಕಂಬಗಳನ್ನು ಹಾಕಿಕೊಂಡಿದ್ದೇವೆ.

ಇದು ನಮಗೆ ಅಸುರಕ್ಷತೆ ಕಾಡುತ್ತಿದೆ. ಇಷ್ಟಾದರೂ ನಮ್ಮ ಸಮಸ್ಯೆ ಕೇಳಲು ಯಾರೂ ಬಂದಿಲ್ಲ ಎಂದು ಬಡಾವಣೆಯ ಬಾಬು ಗುತ್ತೇದಾರ, ವಿಷ್ಣು ಗೌಳಿ, ಲಕ್ಷ್ಮೀ ಗುತ್ತೇದಾರ, ಬಸವರಾಜ ಅಣಕಲ್, ಶರಣಯ್ಯ ಗುತ್ತೇದಾರ, ಸುರೇಶ ಪವಾರ, ಭೀಮಾ ಜಾಧವ ಜೆಸ್ಕಾಂಗೆ ಶಾಪ ಹಾಕುತ್ತಿದ್ದಾರೆ. ಆದಷ್ಟು ಬೇಗ ನಮಗೆ ಸಿಮೆಂಟ್ ವಿದ್ಯುತ್ ಕಂಬಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ.

24ಜಿಯು-ವಾಡಿ2
ವಾಡಿ: ಜೆಸ್ಕಾಂ ಅಧಿಕಾರಿಗಳಿಗೆ ಅರ್ಜಿ ಕೊಟ್ಟು ಬೇಸತ್ತ ಸೋನಾಬಾಯಿ ಬಡಾವಣೆಯ ಜನರು ತಮ್ಮ ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ಕಂಬಗಳನ್ನು ಅಳವಡಿಸಿ ಮನೆಗೆ ಬೆಳಕು ಪಡೆದಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago