ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದ ಅಜಾತಶತ್ರು ದಿ. ಡಾ. ಎನ್.ಧರ್ಮಸಿಂಗ್ ಜು.27 ಪುಣ್ಯಸ್ಮರಣೆ

ಈ ನಾಡು, ರಾಷ್ಟ್ರಕಂಡ ರಾಜಕೀಯ ನಾಯಕರು ಮತ್ತು ಅಜಾತ ಶತ್ರು… ಮಾಜಿ ಮುಖ್ಯಮಂತ್ರಿ ದಿ.ಡಾ.ಎನ್. ಧರ್ಮಸಿಂಗ್ ಅವರು 81 ವರ್ಷದ ಬದುಕಿನ ಜೊತೆಗೆ 50 ವರ್ಷದ ರಾಜಕೀಯ ಜೀವನದ ಸಂಕ್ಷಿಪ್ತ ಮಾಹಿತಿ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮ ಹುಟ್ಟೂರು. ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ ಕಲಬುರಗಿಯಲ್ಲಿ ನಂತರ ಹೈದರಾಬಾದ್ ನಲ್ಲಿ ಉನ್ನತ ಕಾನೂನು ಶಿಕ್ಷಣ, ನಂತರ ವಕೀಲರಾಗಿ ಸೇವೆ. ಪ್ರಭಾವತಿ ಅವರ ಧರ್ಮಪತ್ನಿ, ಇಬ್ಬರು ಪುತ್ರರು, ಒಬ್ಬರು ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಇನ್ನೊಬ್ಬರು ವಿರೋಧ ಪಕ್ಷದ ಮುಖ್ಯ ಸಚೇತಕರು ಮತ್ತು ಜೇವರ್ಗಿ ಶಾಸಕರಾದ ಡಾ. ಅಜಯಸಿಂಗ್, ಒಬ್ಬರು ಸುಪುತ್ರಿ ಪ್ರೀರ್ಯದರ್ಶಿನಿ ಚಂದ್ರಸಿಂಗ್ ಅವರದು ಚಿಕ್ಕ ಕುಟುಂಬ, ಚೊಕ್ಕ ಕುಟುಂಬ ಜೊತೆಗೆ ಸಂತಸದ ಜೀವನವಾಗಿತ್ತು.

ಅಜಾತಶತ್ರು ಮಾಜಿ ಮುಖ್ಯಮಂತ್ರಿ ದಿ.ಡಾ.ಎನ್. ಧರ್ಮಸಿಂಗ್ ಸಾಹೇಬರು ಸುಮಾರು 50 ವರ್ಷಗಳ ಕಾಲ ರಾಜಕೀಯದಲ್ಲಿ ಇದು ಸಾರ್ವಜನಿಕ ಸೇವೆ ಮಾಡಿದರು.

13 ಸಾರ್ವತ್ರಿಕ ಚುನಾವಣೆಯಲ್ಲಿ 11 ಬಾರಿ ಗೆಲುವು ಸಾಧಿಸಿದ ಏಕೈಕ ವ್ಯಕ್ತಿ. ಪ್ರಥಮ ಚುನಾವಣೆಯಿಂದ 10 ಚುನಾವಣೆ ಸತತ ಗೆಲುವು ಒಂದು ಬಾರಿ ಸೋಲು, ಮತ್ತೆ ಒಂದು ಬಾರಿ ಗೆಲುವು ನಂತರ ಸೋಲು.
ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆ, ನಂತರ ಸತತವಾಗಿ ಎಂಟು ಬಾರಿ ಜೇವರ್ಗಿ ಶಾಸಕರಾಗಿ, ಒಂದು ಬಾರಿ ಕಲಬುರಗಿ ಜಿಲ್ಲೆಯ ಲೋಕಸಭೆ ಸದಸ್ಯರಾಗಿ, ಇನ್ನೊಂದು ಬಾರಿ ಬೀದರ್ ಜಿಲ್ಲೆಯ ಲೋಕಸಭಾ ಸದಸ್ಯರಾಗಿದ್ದರು.

ಕೆಪಿಸಿಸಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ, ಹಲವಾರು ಬಾರಿ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಗೃಹ ಖಾತೆ, ಲೋಕೋಪಯೋಗಿ, ಕಂದಾಯ, ಅಬಕಾರಿ, ಸಮಾಜ ಕಲ್ಯಾಣ ಮತ್ತು ನಗರಾಭಿವೃದ್ಧಿ ಸಚಿವರಾಗಿ ಇನ್ನೂ ಹಲವಾರು ಖಾತೆಯ ಮಂತ್ರಿಗಳಾಗಿ ಸೇವೆ ಸಲ್ಲಿಸಿದರು. ನಮ್ಮ ಭಾಗದಲ್ಲಿ ಹೈಕೋರ್ಟ್ ಪೀಠ, ರಸ್ತೆ ಕಾಮಗಾರಿಗಳು, ಸರ್ಕಾರದ ಕಛೇರಿ ಕಟ್ಟಡಗಳು, ಆರೋಗ್ಯ, ಶಿಕ್ಷಣ ಸೇವೆ ಮಾಡಿದ್ದಾರೆ. ಕೇಂದ್ರ ಸರ್ಕಾರದಲ್ಲಿ ನಮ್ಮ ಹೈ.ಕ.ಭಾಗದ 371(J) ಕಲಂ ತಿದ್ದುಪಡಿ ರೂವಾರಿಗಳು ಆಗಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮುಖಂಡರಿಗೆ ಚಿರಪರಿಚಿತರು.

ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯತೆಯಿಂದ ಮಾತನಾಡುವ ಸರಳ, ಸಜ್ಜನ ರಾಜಕಾರಣಿಗಳು ಆಗಿದ್ದರು ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಸಹೃದತೆಯ ರಾಜಕಾರಣಿಗಳು, ಇಡೀ ರಾಜ್ಯ ರಾಷ್ಟ್ರ ನಾಯಕರು ಅವರ ಜೊತೆಗೆ ಉತ್ತಮ ಒಡನಾಡಿ ಆಗಿದ್ದರು. ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚಿನ ಅಭಿಮಾನಿಗಳ ಬಳಗ ಹೊಂದಿದ ರಾಜಕಾರಣಿ ಎನ್ನಬಹುದು. ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ದಿ.ಡಾ.ಎನ್. ಧರ್ಮಸಿಂಗ್ ಅವರು ಆಗಿದ್ದರು.

ಇಂದಿನ ಆಧುನಿಕ ಯುಗದಲ್ಲಿ ಯುವಕರಿಗೆ, ರಾಜಕಾರಣಿಗಳಿಗೆ ಮಾದರಿ ಎನ್ನಬಹುದು. ಅವರ ನೆನಪು ಈಗ ಮಾತ್ರ. ಅವರ ತೃತೀಯ ವರ್ಷದ ಪುಣ್ಯೆಸ್ಮರಣೆ ದಿನಾಂಕ 27.07.2020, ಸೋಮವಾರ ಇದೆ. ಕೊರೋನಾ ಕಾಲದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಿ, ಸ್ಯಾನಿಟೆಜರ್ ಉಪಯೋಗಿಸಿ, ಆರೋಗ್ಯ ಕಾಪಾಡಿಕೊಳ್ಳುವುದು ಜೊತೆಗೆ ಸಂಕ್ಷಿಪ್ತವಾಗಿ ಅವರ ಪುಣ್ಯೆಸ್ಮರಣೆ ಕಾರ್ಯಕ್ರಮಗಳು ಅವರ ಅಭಿಮಾನಿಗಳು ಆಚರಣೆ ಮನೆ ಮನಗಳಲ್ಲಿ ನಡೆಯಲ್ಲಿ ಎಂದು ಮನವಿ ಮತ್ತು ವಿನಂತಿ.

ಬಿ.ಎಂ.ಪಾಟೀಲ ಕಲ್ಲೂರ
9845268676
emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago