ಬಿಸಿ ಬಿಸಿ ಸುದ್ದಿ

ಯಡ್ರಾಮಿಯಲ್ಲಿ ದಲಿತರ ಮದುವೆ ಮೆರವಣಿಗೆ ಅಡ್ಡಿ: ಸವರ್ಣೀಯರಿಂದ ಹಲ್ಲೆ

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ  ನಾಗರಹಳ್ಳಿ ಗ್ರಾಮದಲ್ಲಿ ರವಿವಾರ ರಾತ್ರಿ ದಲಿತರು ಮದುವೆ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಏಕಾಏಕಿ ದಲಿತರ  ಮೇಲೆ ಸವರ್ಣಿಯರು ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಗ್ರಾಮದಲ್ಲಿ ಸವರ್ಣೀಯರು ಮಹಿಳೆಯರು ಮಕ್ಕಳೆನ್ನದೇ ಮನಸೋ ಇಚ್ಚೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮದುವೆಯಾದ ದಲಿತರು ಗ್ರಾಮದಲ್ಲಿ ಪ್ರವೇಶಿಸಬಾರದು ಮತ್ತು ಮೆರವಣಿಗೆ ಮಾಡಬಾರದು ಎಂದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗುತ್ತಿದ್ದು, ಸ್ಥಳಕ್ಕೆ ರಕ್ಷಣೆಗೆ ಬಂದ ಪೋಲಿಸರ ಮೇಲು ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಮಹಿಳೆ ಮಕ್ಕಳೆನ್ನದೆ ಹಿರಿಯ ಜೀವಗಳ ಮೇಲೆ ಮನಬಂದಂತೆ ಕಲ್ಲುˌಕಟ್ಟಿಗೆಗಳಿಂದ ಹೊಡೆದು ಕ್ರೂರವಾಗಿ ನಡೆದ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳು ಸ್ಥಳೀಯ ಜೇವರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ಸಂಪೂರ್ಣ ಬಿಗುವಿನ ವಾತಾವರಣವಿದ್ದುˌ ಹೆಚ್ಚಿನ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

55 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago