ಸುರಪುರ ತಾಲೂಕಿನಾದ್ಯಂತ ೫೬ ವಠಾರ ಶಾಲೆಗಳ ಮೂಲಕ ಮಕ್ಕಳ ಕಲಿಕೆ ಆರಂಭ

ಸುರಪುರ: ಕೊರೊನಾ ಹಾವಳಿಯಿಂದಾಗಿ ಶಾಲೆಗಳು ಆರಂಭವಾಗದೆ ಸತತವಾಗಿ ನಾಲ್ಕುತಿಂಗಳಿನಿಂದ ಮಕ್ಕಳು ಮನೆಯಲ್ಲಿಯೆ ಇರುವುದರಿಂದ ಶಾಲೆಯ ಪರಿಪಾಠವಿಲ್ಲದಂತಾಗಿತ್ತು ಆದರೆ ಮಕ್ಕಳನ್ನು ಕಲಿಕೆಯಲ್ಲಿರಿಸಲು ವಠಾರ ಶಾಲೆ ಆರಂಭ ಒಂದು ಒಳ್ಳೆಯ ಪ್ರಯತ್ನವಾಗಿದೆ ಎಂದು ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಖಾದರ್ ಪಟೇಲ್ ಮಾತನಾಡಿದರು.

ನಗರದ ತಿಮ್ಮಾಪುರದ ಮಾರ್ಕಂಡೇಶ್ವರ ದೇವಸ್ಥಾನ ಆವರಣದಲ್ಲಿ ಆರಂಭವಾಗಿರುವ ವಠಾರ ಶಾಲೆಗೆ ಭೇಟಿ ನೀಡಿ ಮಾತನಾಡಿ, ತಾಲೂಕಿನಲ್ಲಿ ಒಟ್ಟು ೫೬ ಕಡೆಗಳಲ್ಲಿ ಈ ವಠಾರ ಶಾಲೆಗಳನ್ನು ತೆರೆಯಲಾಗಿದೆ ಆಯಾ ವಠಾರಗಳಲ್ಲಿರುವ ಶಾಲೆಯ ಶಿಕ್ಷಕರುಗಳು ಓಣಿಯಲ್ಲಿರುವ ದೇವಸ್ಥಾನ, ಮಸೀದಿ, ಪಾರ್ಕಗಳಂತೆ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಪ್ರಾಯೋಗಿಕವಾಗಿ ಅಲ್ಲಿ ೧೫ ರಿಂದ ೨೦ ಮಕ್ಕಳನ್ನು ಸಾಮಾಜಿಕ ಅಂತರ ಕಾಪಾಡಿಕೊಂಡು ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪಾಠಮಾಡಲು ತಿಳಿಸಲಾಗಿದೆ ಹಾಗೆ ಮಕ್ಕಳಿಗೆ ಹಿಂದಿನ ತರಗತಿಯಲ್ಲಿ ಕಲೆತಿರುವ ಪಾಠಗಳನ್ನು ಮನನ ಮಾಡಿಸಬೇಕು ಹಾಗೂ ಅವರನ್ನು ಶಿಕ್ಷಣ ಮತ್ತು ಕಲೆಗಳಲ್ಲಿ ಆಸಕ್ತಿ ಹೆಚ್ಚಿಸುವಂತಾ ಪಾಠಗಳನ್ನು ಮಾಡಿ ಎಂದು ತಿಳಿಸಲಾಗಿದೆ.

ತಾಲೂಕಿನ ಕೆಲವುಕಡೆ ಪ್ರಾಯೋಗಿಕವಾಗಿ ವಠಾರಗಳಲ್ಲಿ ಶಾಲೆಯನ್ನು ಆರಂಬಿಸಿ ಸೇತುಬಂಧರೋಪದಲ್ಲಿ ಮಕ್ಕಳಿಗೆ ಪಾಠಮಾಡಲು ತಿಳಿಸಲಾಗಿತ್ತು ಅದರಂತೆ ಶಿಕ್ಷಕರುಕೂಡ ಉತ್ತಮವಾಗಿ ಸ್ಪಂದಿಸಿ ಮಕ್ಕಳಿಗೆ ಪಾಠಮಾಡುತ್ತಿದ್ದಾರೆ ಇನ್ನು ಕೆಲವು ದಿನಗಳಲ್ಲಿ ಈ ಕುರಿತು ಸರ್ಕಾರವು ಮಾರ್ಗಸೂಚಿಹೊರಡಿಸುವ ಸಂಭವಿದೆ. – ಮಾಧವರಡ್ಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸುರಪುರ.

ಈ ಕಾರ್ಯಕ್ರಮದಲ್ಲಿ ಶಿಕ್ಷಕರುಗಳು ಮತ್ತು ಮಕ್ಕಳು ಸ್ವಇಚ್ಛೆಯಿಂದ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಡಯಟ್ ಉಪನ್ಯಾಸಕ ಶೇಕರಪ್ಪ, ಮುಖ್ಯಗುರುಗಳಾದ ಮುದ್ದಪ್ಪ, ಸಿಆರ್‌ಪಿ ಚನ್ನಪ್ಪ.ಕೆ, ಶಿಕ್ಷಕರಾದ ಶಾಂತಾ ಎಮ್, ವೀಣಾ, ಯಾಸ್ಮೀನ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420