ಬಕ್ರೀದ್ ಸಂದರ್ಭದಲ್ಲಿನ ಅಕ್ರಮ ಗೋ ಹತ್ಯೆ ತಡೆಯಲು ರಾಮ್ ಸೇನಾ ಆಗ್ರಹ

0
40

ಸುರಪುರ: ಮುಂಬರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯಬಹುದಾದ ಅಕ್ರಮ ಗೋ ಹತ್ಯೆ ಮತ್ತು ಅಕ್ರಮ ಗೋ ಸಾಗಾಟವನ್ನು ತಡೆಯುವಂತೆ ಆಗ್ರಹಿಸಿ ರಾಮ್ ಸೇನಾ ಕಾರ್ಯಕರ್ತರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ನಗರದ ತಹಸೀಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ,ರಾಮ್ ಸೇನಾ ತಾಲೂಕು ಅಧ್ಯಕ್ಷ ಶರಣು ನಾಯಕ ಡೊಣ್ಣಿಗೇರಾ, ಮುಂಬರುವ ಬಕ್ರೀದ್ ಹಬ್ಬದ ಸಮಯದಲ್ಲಿ ತಾಲೂಕಿನಾದ್ಯಂತ ಅಕ್ರಮವಾಗಿ ಗೋ ಹತ್ಯೆ ನಡೆಯುವ ಸಾಧ್ಯತೆ ಅಕ್ರಮವಾಗಿ ಗೋವುಗಳನ್ನು ಬೇರೆಡೆಗೆ ಸಾಗಿಸುವ ಸಾಧ್ಯತೆ ಇದೆ.ಆದ್ದರಿಂದ ನಗರದ ನಾಲ್ಕು ದಿಕ್ಕುಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅಕ್ರಮ ಗೋ ಸಾಗಾಟ ತಡೆಯಬೇಕು ಮತ್ತು ನಗರದಲ್ಲಿ ಅಕ್ರಮ ಗೋ ಹತ್ಯೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Contact Your\'s Advertisement; 9902492681

ನಂತರ ತಾಲೂಕು ದಂಡಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಮೂಲಕ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಆರಕ್ಷಕ ನಿರೀಕ್ಷಕರಿಗು ಮನವಿ ಮಾಡಿದರು. ಸಂಘದ ತಾಲೂಕು ಗೌರವಾಧ್ಯಕ್ಷ ಕುಮಾರ ನಾಯಕ,ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದೀವಳಗುಡ್ಡ,ಕಾರ್ಯದರ್ಶಿ ಹೈಯಾಳಪ್ಪ ಹಾದಿಮನಿ,ಶ್ರವಣ ನಾಯಕ ಡೊಣ್ಣಿಗೇರಾ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here