ಸುರಪುರ: ಮುಂಬರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯಬಹುದಾದ ಅಕ್ರಮ ಗೋ ಹತ್ಯೆ ಮತ್ತು ಅಕ್ರಮ ಗೋ ಸಾಗಾಟವನ್ನು ತಡೆಯುವಂತೆ ಆಗ್ರಹಿಸಿ ರಾಮ್ ಸೇನಾ ಕಾರ್ಯಕರ್ತರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ನಗರದ ತಹಸೀಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ,ರಾಮ್ ಸೇನಾ ತಾಲೂಕು ಅಧ್ಯಕ್ಷ ಶರಣು ನಾಯಕ ಡೊಣ್ಣಿಗೇರಾ, ಮುಂಬರುವ ಬಕ್ರೀದ್ ಹಬ್ಬದ ಸಮಯದಲ್ಲಿ ತಾಲೂಕಿನಾದ್ಯಂತ ಅಕ್ರಮವಾಗಿ ಗೋ ಹತ್ಯೆ ನಡೆಯುವ ಸಾಧ್ಯತೆ ಅಕ್ರಮವಾಗಿ ಗೋವುಗಳನ್ನು ಬೇರೆಡೆಗೆ ಸಾಗಿಸುವ ಸಾಧ್ಯತೆ ಇದೆ.ಆದ್ದರಿಂದ ನಗರದ ನಾಲ್ಕು ದಿಕ್ಕುಗಳಲ್ಲಿ ಪೊಲೀಸ್ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ಅಕ್ರಮ ಗೋ ಸಾಗಾಟ ತಡೆಯಬೇಕು ಮತ್ತು ನಗರದಲ್ಲಿ ಅಕ್ರಮ ಗೋ ಹತ್ಯೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನಂತರ ತಾಲೂಕು ದಂಡಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಮೂಲಕ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಆರಕ್ಷಕ ನಿರೀಕ್ಷಕರಿಗು ಮನವಿ ಮಾಡಿದರು. ಸಂಘದ ತಾಲೂಕು ಗೌರವಾಧ್ಯಕ್ಷ ಕುಮಾರ ನಾಯಕ,ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದೀವಳಗುಡ್ಡ,ಕಾರ್ಯದರ್ಶಿ ಹೈಯಾಳಪ್ಪ ಹಾದಿಮನಿ,ಶ್ರವಣ ನಾಯಕ ಡೊಣ್ಣಿಗೇರಾ ಇತರರಿದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…