ಕಲಬುರಗಿ: ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದ್ದು ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ನಡುವೆ ಗಾಯದ ಮೇಲೆ ಬರೆ ಎಳೆದಂತೆ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರದ ಎರಡನೆಯ ಕಂತು ನೀಡಲು ಕೇಂದ್ರ ಸರಕಾರ ನಿರಾಕರಣೆ ಮಾಡಿದೆ. ರಾಜ್ಯದಿಂದ ಆಯ್ಕೆಯಾಗಿ ಹೋದ 25 ಬಿಜೆಪಿ ಸಂಸದರಿಗೆ ಈ ಕುರಿತು ಪ್ರಶ್ನೆ ಮಾಡಲು ಧೈರ್ಯವಿಲ್ಲವೇ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕೆಮಾಡಿದ್ದಾರೆ.
ತಮ್ಮ ಸರಣಿ ಟ್ವೀಟ್ ಮೂಲಕ ಕೇಂದ್ರ ಸರಕಾರದ ನಿಲುವನ್ನು ಖಂಡಿಸಿರುವ ಶಾಸಕರು ಜಿಎಸ್ ಟಿ ಪರಿಹಾರ ಮಾತ್ರವಲ್ಲದೇ, 15ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ 9,000 ಕೋಟಿ ರೂ. ಖೋತಾ ಮಾಡಿದೆ ಹಾಗೂ ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಕೂಡಾ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ ಇದು ರಾಜ್ಯದ ಅಭಿವೃದ್ದಿಗೆ ಅಡ್ಡಗಾಲಾಗಿ ಪರಿಣಮಿಸಿದೆ. ಇದನ್ನು ಪ್ರಶ್ನಿಸಬೇಕಿರುವ ಬಿಜೆಪಿಯವರು ಸುಮ್ಮನಿರುವುದೇಕೆ ? ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಯಾವೊಬ್ಬ ಸಂಸದರಿಗೆ ಇಲ್ಲವೇ? ಎಂದು ಕುಟುಕಿದ್ದಾರೆ.
ತಮ್ಮ ಸ್ಥಾನಮಾನ ಉಳಿಸಿಕೊಳ್ಳಲು “ದೆಹಲಿ ಪೆರೇಡ್” ಮಾಡುವ ಬಿಜೆಪಿ ನಾಯಕರಿಗೆ ರಾಜ್ಯದ ಹಕ್ಕಿಗಾಗಿ ಹೋರಾಡೋಕೆ ಪುರಸೊತ್ತಿಲ್ವಾ? ಎಂದು ಪ್ರಶ್ನಿಸಿರುವ ಶಾಸಕರು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ಸರ್ಕಾರ ಮತ್ತು ಬಿಜೆಪಿ ನಾಯಕರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಜರಿದಿದ್ದಾರೆ.
ಪ್ರಧಾನಿ ಮೋದಿಯರ ಆತ್ಮನಿರ್ಭರ ಹೇಳಿಕೆಯನ್ನು ಪ್ರಸ್ತಾಪಿಸಿ ಪ್ರಿಯಾಂಕ್ ಖರ್ಗೆ ಅವರು ” ನಮಗೆ ಸಲ್ಲಬೇಕಾದ ಹಣ ನೀಡದೇ, ರಾಜ್ಯವನ್ನ ಬೀದಿಯಲ್ಲಿ ಬಿಡುವುದೇ ಆತ್ಮನಿರ್ಭರತೆಯಾ ” ? ಎಂದು ವ್ಯಂಗ್ಯವಾಡಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…