ಮಾನವೀಯತೆ ಮೈಗೂಡಿಸಿಕೊಂಡರೆ ವೈದ್ಯರ ಸೇವೆ ಸಾರ್ಥಕ – ಮೇಕಿನ್

ಶಹಾಬಾದ:ಸ್ವಾರ್ಥ, ಅಹಂಕಾರ ದೂರವಿಟ್ಟು ಮಾನವೀಯತೆ ಮೈಗೂಡಿಸಿಕೊಂಡಾಗ ಮಾತ್ರ ವೈದ್ಯರ ಸೇವೆ ಸಾರ್ಥಕವಾಗಲಿದೆ ಎಂದು ಚಿತ್ತಾಪೂರ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸುರೇಶ ಮೇಕಿನ್ ಹೇಳಿದರು.
ಅವರು ಶುಕ್ರವಾರ ನಗರದ ಸಮುದಾಯ ಆರೋಗ್ಯ ಕೇಂದ್ರ ವೈದ್ಯರು ಮತ್ತು ಸಿಬ್ಬಂದಿಗಳಿಂದ ಆಯೋಜಿಸಲಾದ ವೈದ್ಯಾಧಿಕಾರಿ ಡಾ.ಪರಮೇಶ್ವರ.ಎಮ್.ಸಜ್ಜನ್ ಅವರ ವಯೋನಿವೃತ್ತಿ ಹಾಗೂ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಪ್ರತಿ ಸರಕಾರಿ ನೌಕರನಿಗೆ ನಿವೃತ್ತಿ ಅನಿವಾರ್ಯ.ಯಾವುದೇ ಇಲಾಖೆಯಲ್ಲಿ ಮುಖ್ಯಸ್ಥರು ತಮ್ಮ ಕೆಲಸದಲ್ಲಿ ಯಶಸ್ವಿಯಾಗಬೇಕಾದರೆ ಮಾನವೀಯತೆ ಹಾಗೂ ಸರಳತೆ ಇರಬೇಕು. ಈ ಗುಣಗಳಿಂದಲೇ ಡಾ.ಸಜ್ಜನ್ ಅವರು ಒಂದೇ ಸ್ಥಳದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ ಆಡಳಿತಾಧಿಕಾರಿಯಾಗಿ ನಿರ್ವಹಿಸಿದ್ದಾರೆ.ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹೇಳಿದರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಪರಮೇಶ್ವರ ಸಜ್ಜನ್, ಶಹಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಿಬ್ಬಂದಿಗಳು, ವೈದ್ಯರು ಹಾಗೂ ನಗರದ ನಾಗರಿಕರ ಸಹಕಾರವೇ ಕಾರಣ.ಇಲ್ಲಿನ ಎರಡು ದಶಕಗಳ ಕಾಲ ಮಾಡಿದ ಸೇವೆ ಎಂದಿಗೂ ಮರೆಯಲಾಗದು ಎಂದು ಹೇಳಿದರು.
ಶ್ರೀಮತಿ ಸರಸ್ವತಿ ಪರಮೇಶ್ವರ ಸಜ್ಜನ್,ಡಾ.ಅಬ್ದುಲ್ ರಹೀಮ್, ಡಾ.ಸಂಧ್ಯಾ ಡೆಂಗೆ, ಡಾ.ಅಶ್ವಿನಿ ನಿಡಗುಂದಿ, ಮೋಹನ ಗಾಯಕವಾಡ, ಸಂಜಯ ರಾಠೋಡ, ಯುಸೂಫ ನಾಕೇದಾರ, ಶಿವಕುಮಾರ ಅಲ್ಲೂರ್, ಖಾಜಾ ನಿಸಾಲೋದ್ದಿನ್, ನಸಿರೋದ್ದಿನ್,ಜಯಶ್ರೀ,ರಾಹುಲ್, ಸಂತೋಷ ಸಲಗರ, ಶಶಿಕಾಂತ ಭರಣಿ, ರಮೇಶ ಕುಲಕರ್ಣಿ, ಜಗನ್ನಾಥ.ಎಸ್.ಹೆಚ್, ರಾಘವೇಂದ್ರ.ಎಮ್.ಜಿ, ಗಣಪತರಾವ ಮಾನೆ, ಸಿದ್ದು ಚೌಧರಿ ಇತರರು ಇದ್ದರು.

 

emedia line

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420