ಕೊರೊನಾ ವಿರುದ್ಧ ಜಾಗೃತಿ ಅಭಿಯಾನ: ವಿವಿಧ ಸಂಘಟನೆಗಳ ಪದಾಧಿಕಾರಿ ನೇಮಕ

ಚಿಂಚೋಳಿ: ತಾಲೂಕಿನ ದೋಟಿಕೋಳ ಗ್ರಾಮದಲ್ಲಿಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡಕರ್ ಹಾಗು ತಥಾಗತ ಭಗವಾನ್ ಗೌತಮ್ ಬುದ್ಧರ ಭಾವಚಿತ್ರಕ್ಕೆ ಪೂಜೆ ಮಾಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಹಮಾರಿ ಕೋರೋನಾ ವೈರಸ್ ಸೊಂಕು ಹರಡುವಿಕೆ ತಡೆಗಟ್ಟುವ ಬಗ್ಗೆ ಜನರಿಗೆ ಅರಿವು ಮೂಡಿಸಿ ಮಾಹಪುರುಷರ ಜೀವನ್ ಸಂದೇಶ್ ಅಭಿಯಾನ ಕಾರ್ಯಕ್ರಮ ಜರುಗಿತು.

ಪ್ರತಿಯೋಬ್ಬರ ಜೀವನದಲ್ಲಿ ಒಂದಿಲ್ಲೊಂದು ಅವಮಾನ, ಕಷ್ಠ, ಸುಖಗಳು ಬರುವುದು ಕಟ್ಟಿಟ್ಟ ಬುತ್ತಿ ಅವುಗಳಿಗೆ ಯಾರು ಹೆದರದೆ, ಬಂದ ಕಷ್ಠಗಳು ಚಾಲೆಂಜಾಗಿ ಸ್ವಿಕಾರ ಮಾಡಿ ಬದುಕುತ್ತಾರೆಯೊ ಅಂಥವರು ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗುತ್ತಾರೆಂದು ಭಾರತ ಮುಕ್ತಿ ಮೊರ್ಚಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿಯವರು ಹೇಳಿದರು.

ಮಾಹಪುರುಷರ ಜೀವನದಲ್ಲಿಯು ಅನೇಕ ಕಷ್ಟ, ಕಾರ್ಪಣ್ಯಗಳು ಬಂದರು ಅವರು ಹೆದರದೆ ಸಾಮಾಜಿಕ ಪರಿವರ್ತನೆಯ ಚಳುವಳಿಯ ಹಾದಿಯಲ್ಲಿ ಮುನ್ನುಡೆದದಕ್ಕಾಗಿ ಇವತ್ತು ಅವರ ವಿಚಾರ ಧಾರೆಗಳು ಸಮಾಜದಲ್ಲಿ ಜೀವಂತವಾಗಿವೆ ಎಂದರು.

ಬಾಬಾಸಾಹೇಬ್ ಅಂಬೇಡ್ಕರರಿಗೆ ಕುಡಿಯಲು ನೀರು ಸಿಗಲಿಲ್ಲ ಆದರೆ ಇಂದು ನಮ್ಮ ಅಡುಗೆ ಮನೆಯಲ್ಲಿ ನೀರು ಬರುತ್ತಿವೆ ಅದಕ್ಕೆ ಕಾರಣ ಬಾಬಾಸಾಹೇಬ ಅಂಬೇಡ್ಕರವರು ನಡೆಸಿದ ಸಾಮಾಜಿಕ ಪರಿವರ್ತನೆಯ ಚಳುವಳಿ ಕಾರಣವೆಂದರೆ ತಪ್ಪಾಗಲಾರದು ಅಂತಹ ಮಾಹಪುರುಷರ ವಿಚಾರಧಾರೆಗಳು ನಮ್ಮ ಸಮಾಜ ಮರೆಯೆದೆ ಪ್ರತಿಹಳ್ಳಿ ಹಳ್ಳಿಗು ಪ್ರಚಾರ ಮಾಡುವುದು ಅನಿವಾರ್ಯವಾಗಿದೆ ಎಂದು ಕರೆ ನೀಡಿದರು.

ಭಾರತ ಮುಕ್ತಿ ಮೊರ್ಚಾ ಹಾಗೂ ಭಾರತೀಯ ವಿದ್ಯಾರ್ಥಿ ಮೊರ್ಚಾ ಸಂಘಟನೆ ದೇಶದಾದ್ಯಂತ ವಿಚಾರ ಪರಿವರ್ತನೆ ಕ್ರಾಂತಿ ಮಾಡುತ್ತಾ ಬರುತ್ತಿದೆ ಯುವಕರಿಗೆ ಸಮಾಜಕ್ಕೆ ಮಾಹತ್ಮರ ವಿಚಾರ ತಿಳಿಸದಿದ್ದರೆ ದೇಶಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಎಂದು ಸುದಿರ್ಗವಾಗಿ ಎಂದರು.

ನಂತರ ಬಹುಜನ ಕ್ರಾಂತಿ ಮೊರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಶಿರಾಮ ದೇಗಲ್ಮಡಿ, ಭಾರತ ಮುಕ್ತಿ ಮೊರ್ಚಾ ಸಂಘಟನೆ ತಾಲೂಕಾಧ್ಯಕ್ಷ ಉಮೇಶ ದೋಟಿಕೋಳ, ವೇದಿಕೆಯಲ್ಲಿ ರಾಜಕುಮಾರ್ ಬೇನೂರ್, ಶಾಮರಡ್ಡಿ ಸುಲೇಪೇಟ ಉಪಸ್ಥಿತರಿದ್ದರು.

ಇದೇ ವೇಳೆಯಲ್ಲಿ ರಾಷ್ಟ್ರೀಯ ಮೂಲನಿವಾಸಿ ಮಹಿಳಾ ಸಂಘದ ಅಧ್ಯಕ್ಷರಾಗಿ ಶೋಭಾ, ಉಪಾಧ್ಯಕ್ಷರಾಗಿ ಕಮಲಮ್ಮ, ಕಾರ್ಯಧ್ಯಕ್ಷರಾಗಿ, ಮಸ್ತಾನಬಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಮ್ಮ ಇವರಿಗೆ ಆಯ್ಕೆ ಮಾಡಲಾಯಿತು. ರಾಷ್ಟ್ರೀಯ ಕಿಸಾನ್ ಮೊರ್ಚಾ
ಅಧ್ಯಕ್ಷರಾಗಿ ಯಲ್ಲಪ್ಪ ಪೂಜಾರಿ, ಉಪಾಧ್ಯಕ್ಷರಾಗಿ ನಾಗಪ್ಪ, ಕಾರ್ಯಧ್ಯಕ್ಷರಾಗಿ, ಜಗನ್ನಾಥ, ಪ್ರಧಾನ ಕಾರ್ಯದರ್ಶಿಯಾಗಿ ರಾಮಣ್ಣ ರವರನ್ನು ಆಯ್ಕೆ ಮಾಡಲಾಯಿತು, ಭಾರತ ಮುಕ್ತಿ ಮೊರ್ಚಾ ಅಧ್ಯಕ್ಷರಾಗಿ ರಾಜಕುಮಾರ್ ಬೇನೂರ್, ಉಪಾಧ್ಯಕ್ಷರಾಗಿ ಶಿವಲಿಂಗ್, ಕಾರ್ಯಧ್ಯಕ್ಷರಾಗಿ ಸಾಯಿಬಣ್ಣಾ.ಪ್ರಧಾನ ಕಾರ್ಯದರ್ಶಿ ಗೋಪಾಲ, ಸೂರ್ಯಕಾಂತ, ಗುರುನಾಥ, ಮುಂತಾದವರನ್ನು ಆಯ್ಕೆ ಮಾಡಿ ಸಂಘಟನೆ ಜವಾಬ್ದಾರಿ ವಹಿಸಿ ಕೊಡಲಾಯಿತು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420