ಆಳಂದ: ತಾಲೂಕಿನ ಭೂಸನೂರನಲ್ಲಿರುವ ಎನ್ಎಸ್ಎಲ್ ಸುಗರ್ಸ್ ಘಟಕ ೨ರ ಕಬ್ಬು ಅಭಿವೃದ್ಧಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಷೇತ್ರ ಸಹಾಯಕ ಈರಣ್ಣ ಕೋಣೆ ಮತ್ತು ಕೇನ್ ಯಾರ್ಡನ ಅಸಿಸ್ಟಂಟ್ ಸೂಪರವೈಜರ್ ಭುಜಲಿಂಗ ಕಣ್ಣೂರ ಅವರ ನಿವೃತ್ತಿ ಸಮಾರಂಭ ಶುಕ್ರವಾರ ಜರುಗಿತು.
ಇದೇ ಸಂದರ್ಭದಲ್ಲಿ ಕಬ್ಬು ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡ ಅಮರೀಶ ಕದಮ ಹಾಗೂ ಕೇನ್ ಮ್ಯಾನೇಜರ್ ಜಕ್ಕಪ್ಪ ಉಟಗಿ ಅವರನ್ನು ಸ್ವಾಗತಿಸಲಾಯಿತು. ನಿವೃತ್ತರಾದ ಮತ್ತು ಹೊಸದಾಗಿ ನೇಮಕಗೊಂಡ ಅಧಿಕಾರಿಗಳನ್ನು ಎಲ್ಲ ಸಿಬ್ಬಂದಿಗಳ ಪರವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ದೇಸಾಯಿ, ಲೆಕ್ಕ ಪರಿಶೋಧಕ ಪ್ರಕಾಶ ಯರಗಲ, ಹಣಕಾಸು ವಿಭಾಗದ ಸುಭಾಷ್ ಡೋರಾ, ಸಿಬ್ಬಂದಿಗಳಾದ ನಾಗರಾಜ, ಪ್ರಶಾಂತ ಪಾಟೀಲ, ರಾಜೇಶ ಬೆಳಂ, ಶ್ರೀಮಂತ ಮಾಡ್ಯಾಳ, ಮಲ್ಲಿನಾಥ ಮಲಶೆಟ್ಟಿ, ದತ್ತಪ್ಪ ಮೇಲ್ಕೇರಿ, ಶರಣಬಸಪ್ಪ ಲಾವಣಿ ಸೇರಿದಂತೆ ಕಬ್ಬು ಅಭಿವೃದ್ಧಿ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಿದ್ದಾರಾಮ ನಡಗೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಹಾನಿಂಗಪ್ಪ ಜಮಾದಾರ ನಿರೂಪಿಸಿದರೆ, ದೇವೇಂದ್ರ ಮೇಲ್ಕೇರಿ ವಂದಿಸಿದರು. ಸಂಸ್ಥೆಯ ಉಪಾಧ್ಯಕ್ಷ ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…
ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…
ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…
ಶಹಾಬಾದ: ಅನ್ನಭಾಗ್ಯಕ್ಕೆ ಕನ್ನಹಾಕುತ್ತಿರುವ ಸರಕಾರಗಳ ವಿರುದ್ಧ ಪ್ರಬಲ ಜನಾಂದೋಲನವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಎಸ್ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ…
ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ…
ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ…