ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 6 ಕೋಟಿ ರೂಪಾಯಿ ಮೌಲ್ಯದ ಅಗ್ನಿಶಾಮಕ ವಾಹನ ಸೇರ್ಪಡೆಯಾಗಿದೆ. ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರು ಇಂದು ವಿಮಾನ ನಿಲ್ದಾಣದ ಸೇವೆಗೆ ಇದನ್ನು ಸಮರ್ಪಣೆ ಮಾಡಿದರು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 6 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಟ್ರಿಯಾ ದೇಶದಿಂದ ರೊಸೆನ್ ಬೌರ್ (ROSENBAUER) ಎಂಬ ವೊಲ್ವೋ ಕಂಪೆನಿಯ ಈ ಅಗ್ನಿಶಾಮಕ ವಾಹನವನ್ನು ಖರೀದಿಸಿ ತಂದಿದೆ.
ಅತಿಹೆಚ್ಚು ಉಷ್ಣಾಂಶ/ ಶೀತ/ಆರ್ದ್ರತೆ, ಹೊಗೆ, ಧೂಳುಮಯದಂತಹ ಪ್ರತಿಕೂಲ ವಾತಾವರಣದಲ್ಲಿಯೂ ಈ ಅಗ್ನಿಶಾಮಕ ವಾಹನ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸಂಪೂರ್ಣ ಸ್ವಯಂಚಾಲಿತ ವಾಹನ ಇದಾಗಿದ್ದು, ಗರಿಷ್ಠ 121 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ. ಅಗ್ನಿ ಅವಘಡ ಸಂಭವಿಸಿದಾಗ 65 ಮೀಟರ್ ದೂರದವರೆಗೆ ನೀರು ಚಿಮುಕಿಸುವ ಶಕ್ತಿ ಇದಕ್ಕಿದೆ. ಟ್ಯಾಂಕರ್ 6000 ಲೀಟರ್ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಕಾರ್ಯಾಚರಣೆ ವೇಳೆ ಕೆಲವೇ ನಿಮಿಷಗಳಲ್ಲಿ 3000 ಲೀಟರ್ ಹೊರಚಿಮ್ಮಿಸಿ,ಬೆಂಕಿಯ ಜ್ವಾಲೆಗಳನ್ನು ಶಮನಗೊಳಿಸಲಿದೆ.
800 ಲೀಟರ್ ನೊರೆ ( ರಾಸಾಯನಿಕ ಮಿಶ್ರಿತ) ಟ್ಯಾಂಕರನ್ನು ಕೂಡ ಒಳಗೊಂಡಿದೆ. ಅಂದರೆ ತೈಲಗಾರ , ವಿಮಾನ ನಿಲ್ದಾಣಗಳಂತಹ ಸ್ಥಳಗಳಲ್ಲಿ ಅತಿವೇಗವಾಗಿ ವ್ಯಾಪಿಸುವ ಬೆಂಕಿಯನ್ನು ನಂದಿಸಲು ಬಳಸುವ ನೊರೆ ಇದಾಗಿದೆ.
ಒಮ್ಮೆಗೆ ಇಡೀ ಅಗ್ನಿ ಅವಘಡ ಪ್ರದೇಶವನ್ನು ನಿಯಂತ್ರಿಸುವ ಹಾಗೂ ವಿಮಾನದ ರನ್ ವೇ ಗಳಲ್ಲಿ ಚಲಿಸುತ್ತಲೇ ಕಾರ್ಯಾಚರಿಸುವಂತಹ ಆನೆಬಲ ಇದಕ್ಕಿದೆ ಎಂದು ಸಂಸದ ಡಾ ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್ ರಾವ್, ರಾಜ್ಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಮಧು ರಾಠೋಡ್, ಏರ್ ಲೈನ್ಸ್ ಇಲಾಖೆ ಅಧಿಕಾರಿಗಳು ಮುಂತಾದವರು ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…