ಸುರಪುರ: ಇಂದು ನಮ್ಮಂತೆ ಸಗರ ನಾಡಿನಲ್ಲಿಯ ಲಕ್ಷಾಂತರ ಜನ ಯುವಕರಿಗೆ ಸಮಾಜ ಸೇವೆ ಮತ್ತು ನಾಡು ನುಡಿಗಾಗಿ ಹೋರಾಟ ಮನೋಭಾವ ಬೆಳೆಯಲು ಮತ್ತು ಸಮಾಜಮುಖಿಯಾಗಿ ಚಿಂತಿಸುವ ಎಲ್ಲಾ ಯುವಕರಿಗೆ ರಾಜಾ ಮದನಗೋಪಾಲ ನಾಯಕರು ಮಾರ್ಗದರ್ಶಕರಾಗಿದ್ದರು ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮದನ್ ಕಟ್ಟಿಮನಿ ನುಡಿದರು.
ವೇದಿಕೆಯಿಂದ ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕರ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ರಾಜಾ ಮದನಗೋಪಾಲ ನಾಯಕರು ಕೇವಲ ಸಾಂಸ್ಕೃತಿಕ ರಂಗಕ್ಕೆ ಮಾತ್ರ ಸೀಮಿತವಾಗಿರದೆ ಅನೇಕ ನಾಡು ನುಡಿಗಾಗಿ ನಡೆದ ಹೋರಾಟಗಳು ಮತ್ತು ರೈತರು ಕಾರ್ಮಿಕರಿಗಾಗಿ ಮತ್ತು ದೇಶದ ಅನೇಕ ಜ್ವಲಂತ ಸಮಸ್ಯೆಗಳಿಗಾಗಿ ನಡೆದ ಹೋರಾಟಗಳಲ್ಲಿ ಭಾಗವಹಿಸಿದವರು. ಅಲ್ಲದೆ ಅವರು ಸುರಪುರ ನಗರದ ಪರಿಸರ ರಕ್ಷಣೆ ಮಕ್ಕಳ ಶಿಕ್ಷಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಮಹನಿಯರು.ಅವರ ಅಗಲಿಕೆಯಿಂದ ನಾಡು ಬಡವಾದಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ಮಾತನಾಡಿದರು.
ಸಭೆಯ ಆರಂಭದಲ್ಲಿ ರಾಜಾ ಮದನಗೋಪಾಲ ನಾಯಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಆತ್ಮಕ್ಕೆ ಶಾಂತಿ ಕೋರಲಾಯಿತು.ಈ ಸಂದರ್ಭದಲ್ಲಿ ಭೀಮರಾಯ ಹುಲ್ಕಲ್ ಅಮರ (ಬಾಬು) ಧರ್ಮರಾಜ್ ಅಂಬಣ್ಣ ನಾಗರಾಜ ದೇಸಾಯಿ ಬಸವರಾಜ ಮಲ್ಲಮ್ಮ ರಾಜು ಮಂಜು ಯಮನೇಶ ಮುಂದಿನಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…