ಡೀಸೆಲ್ ದರ ಇಳಿಕೆ, ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಲಾರಿ ಮಾಲೀಕರ ಸಂಘಟನೆ ಆಗ್ರಹ

ಬೆಂಗಳೂರು: ಕೇಂದ್ರ ಸರಕಾರ ತೆರಿಗೆಯನ್ನು ಹೆಚ್ಚಿಸಿ ಕೃತಕವಾಗಿ ಡೀಸೆಲ್ ದರವನ್ನು ಹೆಚ್ಚಿಸಿರುವುದನ್ನು ಕಡಿಮೆ ಮಾಡಲು ಕ್ರಮಕೈಗೊಳ್ಳಬೇಕು. ಅಲ್ಲದೆ, ಡೀಸೆಲ್ ದರವನ್ನು ಜಿಎಸ್ಟಿವ್ಯಾಪ್ತಿಗೆ ಒಳಪಡಿಸುವಂತೆ ಫೆಡರೇಷನ್  ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಬಿಚನ್ನಾರೆಡ್ಡಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕೊರೋನಾ ಪರಿಸ್ಥಿತಿ ಇರುವುದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಏರುಪೇರಾಗಿದೆ. ಈ ಸಂಧರ್ಭದಲ್ಲಿನಮ್ಮಸರಕು ಸಾಗಾಣೆ ವಾಹನಗಳ ವ್ಯವಹಾರವು ಕುಂಠಿತಗೊಂಡಿದ್ದು, ಈ ಉದ್ದಿಮೆಯಲ್ಲಿ ಉಳಿಯುವುದೇಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ಡೀಸೆಲ್ ದರಗಳನ್ನು ದಿನೇ ದಿನೇ ಹೆಚ್ಚಿನ ಉದ್ದಿಮೆಗೆ ದೊಡ್ಡಹೊಡೆತವನ್ನು ನೀಡಿದೆ. ರಾಷ್ಟ್ರಾದ್ಯಂತ ಲಾರಿ ಮಾಲೀಕರು ಕೇಂದ್ರ ಸರಕಾರಕ್ಕೆ ಅನೇಕ ಮನವಿಗಳನ್ನು ಸಲ್ಲಿಸಿ ಡೀಸೆಲ್ ದರವನ್ನು ತಗ್ಗಿಸಲು ಪ್ರಾರ್ಥಿಸಿರುತ್ತಾರೆ. ಈಗಿನ ಡೀಸೆಲ್ ಬೆಲೆಯುಕೃತಕವಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ತಮ್ಮ ಪಾಲಿನತೆರಿಗೆಗಳನ್ನು ಹೆಚ್ಚಿಸಿರುವುದರಿಂದಲೇ ಆಗಿದೆ ಎಂದು ಹೇಳಿದರು.

ಅಮೇರಿಕಾ ದೇಶ ಡೀಸೆಲ್ ಮೇಲೆ ಶೇಕಡಾ 19 ರಷ್ಟು ತೆರಿಗೆಯನ್ನು ವಿಧಿಸಿದರೆ, ಫ್ರಾನ್ಸ್ ದೇಶದಲ್ಲಿ ಇದರ ಪ್ರಮಾಣ ಶೇಕಡಾ 63 ರಷ್ಟಿದೆ. ಆದರೆ, ಭಾರತ ದೇಶದಲ್ಲಿ ಮಾತ್ರ ಇದರ ಪ್ರಮಾಣ ಶೇಕಡಾ 250 ರಷ್ಟುಇದೆ. ಈದನ್ನು ನೋಡಿದರೆ ಕೇಂದ್ರ ಸರಕಾರ ಯಾವ ರೀತಿ ಸರಕು ಸಾಗಣೆ ವಾಹನಗಳ ಮಾಲೀಕರ ಮೇಲೆ ಅವೈಜ್ಞಾನಿಕ ತೆರಿಗೆ ಹೊರೆಯನ್ನು ಹಾಕುತ್ತಿದೆ ಎಂದು ಗೊತ್ತಾಗುತ್ತದೆ. ಈಗಿನ ಕೊರೋನಾ ವೈರಾಣು ಪರಿಣಾಮ ದೇಶದ ಆರ್ಥಿಕ ಚಟುವಟಿಕೆಗಳು ಸರಿಯಾಗಿ ನಡೆಯದೇ ಇರುವುದರಿಂದ ದುಬಾರಿ ಡೀಸೆಲ್ ದರವನ್ನು ತಡೆದುಕೊಳ್ಳಲು ಆಗುತ್ತಿಲ್ಲ.

ಆದ್ದರಿಂದ ರಾಷ್ಟ್ರವ್ಯಾಪಿ ಇರುವ ಎಲ್ಲಾ ಲಾರಿ ಮಾಲೀಕರ ಸಂಘಟನೆಗಳು ಜಂಟಿಯಾಗಿ ಚರ್ಚಿಸಿ ಕೇಂದ್ರ ಸರಕಾರಕ್ಕೆ ಪರಿಹಾರ ನೀಡಲು ಮನವಿಯನ್ನು ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

ಡೀಸೆಲ್ ದರವನ್ನುಇಳಿಸುವುದು. ಧರ್ಡ್ ಪಾರ್ಟಿಇನ್ಸೂರೆನ್ಸ್ ನ್ನುಡಿಟ್ಯಾರೀಫ್ ಮಾಡುವುದು. 15 ವರ್ಷದಹಳೆಯವಾಹನಗಳನ್ನುಸ್ಕ್ರಾಪ್ ಮಾಡುವುದರ ಬಗ್ಗೆ ಚರ್ಚಸಿವುದು ಹಾಗೂ ಡೀಸೆಲ್  ದರಗಳನ್ನು ಜಿ.ಎಸ್.ಟಿವ್ಯಾಪ್ತಿಗೆ ಒಳಪಡಿಸುವುದು. ಈ ಮೇಲ್ಕಂಡ ನಾಲ್ಕುಬೇಡಿಕೆಗಳನ್ನು ಕೇಂದ್ರ ಸರಕಾರ ಒಂದು ತಿಂಗಳ ಒಳಗಾಗಿ ಪರಿಹರಿಸಬೇಕು. ಇಲ್ಲದೆ ಇದ್ದ ಪಕ್ಷದಲ್ಲಿ ರಾಷ್ಟ್ರವ್ಯಾಪಿ ಲಾರಿ ಮಾಲೀಕರ ಸಂಘಟನೆಗಳು ಮುಂದಿನ ಪ್ರತಿಭಟನಾ ಮಾರ್ಗವನ್ನು ಹಮ್ಮಿಕೊಳ್ಳಲು ತೀರ್ಮಾನಿಸುವುದು ಅನಿವಾರ್ಯವಾಗಲಿದೆ ಎಂದು ಇದೇ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದಯು. ಶ್ರೀನಿವಾಸ್, ಎನ್ ಶ್ರೀನಿವಾಸ್ ರಾವ್, ಗಾಯ್ಬುಸಾಬ್ ಹೊನ್ನಳ್, ಪ್ರಧಾನ ಕಾರ್ಯದರ್ಶಿ ಆರ್ ವಿ ಪ್ರಕಾಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420