ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನೀಡಿರುವ 450 ಬೆಡ್ ಗಳನ್ನು ಬಳಸಲು ಆಗ್ರಹಿಸಿ ಶಾಸಕ ಖರ್ಗೆ ನೇತೃತ್ವದಲ್ಲಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣದಿಂದ ಜಿಲ್ಲಾಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗಿದ್ದು, ಜಿಲ್ಲೆಯ ಬಹುತೇಕ ಆಸ್ಪತ್ರೆಗಳಲ್ಲಿ ಬೆಡ್‌ಗಳ ಅಭಾವದಿಂದಾಗಿ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, 450 ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ಕಳುಹಿಸಿ ಕೊಡಲಾಗಿತ್ತು. ಆದರೆ, ಸ್ಥಳೀಯ ಬಿಜೆಪಿ ಜನಪ್ರತಿನಿಧಿಗಳ ಒತ್ತಡ ಹಾಗೂ ಕೆಟ್ಟ ರಾಜಕೀಯದಿಂದಾಗಿ ಈ ಬೆಡ್‌ಗಳನ್ನು ಈವೆರಗೂ ಸ್ವೀಕರಿಸಿಲ್ಲ ಎಂದು ಅರೋಪಿಸಿ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನೆ ನಡೆಸಿದ ಅವರು, ಬಹುಶಃ ಕಾಂಗ್ರೆಸ್‌ನವರು ನೀಡಿದ ಬೆಡ್‌ಗಳೆಂದು ಇವುಗಳನ್ನು ಬಳಸಿಕೊಳ್ಳುತ್ತಿಲ್ಲದ ಕಾರಣ, ಈಗ ಆ ಬೆಡ್‌ಗಳ ಮೇಲೆ ಮೋದಿ ಮತ್ತು ಯಡಿಯೂರಪ್ಪನವರ ಚಿತ್ರಗಳನ್ನು ಮುದ್ರಿಸಿ ನೀಡಲಾಗಿದೆ. ಇನ್ನಾದರೂ ಈ ಬೆಡ್‌ಗಳನ್ನು ಬಳಸಿಕೊಂಡು‌ ಜಿಲ್ಲಾಡಳಿತವು ಸೋಂಕಿತರ ಆರೈಕೆ ಮಾಡಬೇಕೆಂದು ಒತ್ತಾಯಿಸಿದರು.

ಕೆಪಿಸಿಸಿ ವತಿಯಿಂದ 550 ಬೆಡ್‌ಗಳನ್ನು ಖರೀದಿಸಿ, ಕಲಬುರಗಿಗೆ ತರಲಾಗಿತ್ತು. ಇವುಗಳಲ್ಲಿ 100 ಬೆಡ್‌ಗಳನ್ನು ಬಳಸಿಕೊಂಡು ಚಿತ್ತಾಪುರದ ನಾಗಾವಿ ಬಳಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಿ, ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ಜಿಲ್ಲಾಸ್ಪತ್ರೆಗಳ ಮೇಲಿನ ಒತ್ತಡ ತಕ್ಕಮಟ್ಟಿಗೆ ಕಡಿಮೆಯಾಗಿದೆ ಎಂದರು‌.

ಕೊರೋನಾ ನಿಯಂತ್ರಿಸಲು ಕಾಂಗ್ರೆಸ್ ಪಕ್ಷವು ಸಹಕಾರ ನೀಡುತ್ತಿಲ್ಲವೆಂದು ಬಿಜೆಪಿಯವರು ವೃಥಾ ಆರೋಪ ಮಾಡುತ್ತಿದ್ದಾರೆ. ಆದರೆ, ನಾವೇ ದುಡ್ಡು ಕೊಟ್ಟು ಬೆಡ್‌ಗಳನ್ನು ಖರೀದಿಸಿ ಕೊಟ್ಟರೂ, ಅವುಗಳನ್ನು ಬಳಸಿಕೊಂಡು ಸೋಂಕಿತರಿಗೆ ಚಿಕಿತ್ಸೆ‌ ನೀಡುವ‌ ಬದಲು ಕೆಟ್ಟ ರಾಜಕೀಯದಲ್ಲಿ ಬಿಜೆಪಿ ತೊಡಗಿಕೊಂಡಿದೆ.

ಜನರು ಬೆಡ್‌ಗಳಿಲ್ಲದೇ ಪರದಾಡುತ್ತಿರುವುದು‌ ದಿನನಿತ್ಯವೂ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಬೆಡ್‌ಗಾಗಿ ಕಲಬುರಗಿಯ ಎಲ್ಲಾ ಆಸ್ಪತ್ರೆಗಳಿಗೂ ಭೇಟಿ ನೀಡಿ, ಕೊನೆಗೂ ಬೆಡ್ ದೊರಕದೇ ಆಟೋದಲ್ಲೇ ಅಸುನೀಗಿದ್ದಾರೆ. ಇಷ್ಟಾದರೂ ಬಿಜೆಪಿ ಸರ್ಕಾರಕ್ಕೆ ಮನಕಲುಕಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ಕೂಡಲೇ ಉಸ್ತುವಾರಿ ಸಚಿವರು ನಾವು ನೀಡಿರುವ ಬೆಡ್‌ಗಳನ್ನು ಸ್ವೀಕರಿಸಲು ದೊಡ್ಡ ಮನಸ್ಸು‌ ಮಾಡಬೇಕು. ಪ್ರಿಯಾಂಕ್ ಅಥವಾ ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಲ, ಜನರಿಗಾಗಿ ದೊಡ್ಡ ಮನಸ್ಸು ಮಾಡಿ, ಈ ಬೆಡ್‌ಗಳನ್ನು ಬಳಸಿಕೊಂಡು‌ ಕಲಬುರಗಿ ಜಿಲ್ಲೆಯಲ್ಲಿ “ಚಿತ್ತಾಪುರ ಮಾದರಿ”ಯ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ, ಜನರಿಗೆ‌ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕೆಂದು ಇಂದಿನ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

,ಈ ವೇಳೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆಲಂ ಪ್ರಭು ಪಾಟೀಲ್ ಜಗದೇವ್ ಗುತ್ತೇದಾರ, ಕಿರಣ್ ದೇಶ್ಮುಖ್, ಮಾಜಿ ಪಾಲಿಕೆ ಸದಸ್ಯ ಶಫಿ ಹುಂಡೇಕರ್ , ಕಾರ್ತೀಕ್ ನಾಟೇಕರ್, ಮಹಮೂದ್ ಪಟೇಲ್, ಸಚೀನ್ ಸರ್ವಾಲ್, ಮೋದಿನ್ ಪಟೇಲ್ ಅಣಬಿ, ಅವೈಜ್ ಶೈಕ್, ಸಾಜಿದ ಅಲಿ ರಂಜೋಳವಿ, ಶಕಿಲ ಸರಡಗಿ, ಚೆತನ ಗೋನಾಯಕ, ಇರಣ಼ ಝಳಕಿ, ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಇದ್ದರು‌.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

4 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

6 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

6 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

8 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

9 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420