ಬಿಜೆಪಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಲಿಕಯ್ಯ ಗುತ್ತೇದಾರ ನೇಮಕ ಪಕ್ಷದ ಬಲವರ್ಧನೆ: ಅಂಬಾರಾಯ ಅಷ್ಠಗಿ

0
25

ಕಲಬುರಗಿ: ಬಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸೇರಿ ಮಾಡಿರುವ ಪಕ್ಷದ ಪದಾಧಿಕಾರಿಗಳ ನೇಮಕಾತಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಲಾಗಿದ್ದೂ,ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಬಲವರ್ಧನೆಗೆ ನಾಂದಿ ಹಾಡಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಲಿಕಯ್ಯ ಗುತ್ತೇದಾರ ಅವರು ಈ ಕಲ್ಯಾಣ ಕರ್ನಾಟಕದ ಜನಾನುರಾಗಿ ಹಾಗೂ ಹಿರಿಯ ಅನುಭವಿ ರಾಜಕಾರಣಿಯಾಗಿದ್ದು,ಪಕ್ಷ ಸಂಘಟನೆ ಮಾಡಲು ಇದು ಸಹಕಾರಿಯಾಗಲಿದೆ.ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಜಯಭೇರಿ ಬಾರಿಸಲಿದೆ ಎಂದು ಅಂಬಾರಾಯಛ ಅಷ್ಠಗಿ ಹೇಳಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here