ಸುರಪುರ: ಭೀಮರಾಯನಗುಡಿ ಆಡಳಿತಾಧಿಕಾರಿ ವಿ.ಕೆ.ಪೋತದಾರ ಮತ್ತು ಇನ್ಚಾರ್ಜ ಎಸ್.ಇ ಜಗನ್ನಾಥರವರನ್ನು ಸರಕಾರ ಕೂಡಲೆ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.
ನಗರದ ಬಸ್ ನಿಲ್ದಾಣದ ಬಳಿ ಹೆಚ್.ಡಿ.ಕುಮಾರಸ್ವಾಮಿ ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಭೀಮರಾಯನಗುಡಿ ಆಡಳಿತಾಧಿಕಾರಿ ಪೋತದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭೀವೃಧ್ದಿಗಾಗಿ ಬಂದ ಅನುದಾನ ದುರುಪಯೋಗಪಡಿಸಿದ್ದಾರೆ.ಅಲ್ಲದೆ ಇಲಾಖೆಯಿಂದ ರೈತರಿಗೆ ಯಾವುದೆ ಉಪಯೋಗವಾಗುವ ಕೆಲಸಗಳ ಮಾಡಿಲ್ಲ,ಇದನ್ನು ಸರಕಾರದ ಗಮನಕ್ಕೆ ತಂದಿದದ್ದರಿಂದ ಪೋತದಾರರ ಜಾಗದಲ್ಲಿ ಇನ್ಚಾರ್ಜ ಎಸ್.ಇ ಜಗನ್ನಾಥರನ್ನು ನೇಮಿಸಲಾಗಿದೆ,ಆದರೆ ಇವರುಕೂಡ ಸರಿಯಾಗಿ ಕೆಲಸ ನಿರ್ವಹಿಸದೆ ಪೋತದಾರರಿಗೆ ಬೆಂಬಲಿಸುತ್ತಿದ್ದಾರೆ.ಆದ್ದರಿಂದ ಸರಕಾರ ಕೂಡಲೆ ಈ ಇಬ್ಬರು ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.
ಕಾಡಾ ನಿರ್ದೇಶಕರಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರ ಪ್ರವೀಣಕುಮಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…