ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವುಕುಮಾರ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ಭೇಟಿ

0
31

ಕಲಬುರಗಿ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ,ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಶೀಘ್ರ ಗುಣಮುಖರಾಗಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವುಕುಮಾರ ಅವರು ಹೇಳಿದ್ದಾರೆ.

ಇಂದು ಜಿಲ್ಲೆಗೆ ಆಗಮಿಸಿದ ಅವರು ಗಾಣಿಗಾಪುರದ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಇಬ್ಬರು ನಾಯಕರು ಶೀಘ್ರ ಗುಣಮುಖರಾಗಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡಲಿ, ಜನರ ಸಂಕಷ್ಟ ದೂರಮಾಡುವ ಶಕ್ತಿಯನ್ನು ಭಗವಂತ ಅವರಿಗೆ ನೀಡಲಿ ಎಂದು ಹಾರೈಸಿದೇನೆ ಎಂದು ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಾಸಕರಾದ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವರಾದ ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜಯ್ ಧರಂ ಸಿಂಗ್, ಎಂ.ವೈ. ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಜತೆಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here