ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಲಬುರಗಿಯಲ್ಲಿ ಟೆಂಪಲ್ ರನ್

0
62

ಕಲಬುರಗಿ: ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಡಿ.ಕೆ ಶಿವಕುಮಾರ ಅವರು ನಗರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು.

ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಗಾಣಗಾಪುರದ ಅವಧೂತ ಚಿಂತನಾ ದತ್ತಾತ್ರೇಯರ ದರ್ಶನ ಪಡೆದರು, ನಂತರ ಕಲಬುರಗಿ ನಗರದ ಖಾಜಾ ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ್ದು, ಶ್ರೀ ಶರಣಬಸವೇಶ್ವರರ ದರ್ಶನಾಶಿರ್ವಾದ ನಂತರ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪೂಜ್ಯ‌ ಡಾ.ಶರಣಬಸವಪ್ಪ ಅಪ್ಪ ಅವರನ್ನು ಭೇಟಿಯಾದರು.

Contact Your\'s Advertisement; 9902492681

ಈ ವೇಳೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಅಜಯ ಸಿಂಗ್, ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಂ ಪ್ರಭು ಪಾಟೀಲ್, ಕಾಂಗ್ರೆಸ್ ಮುಖಂಡ ಮಝರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಾಹಾ ಪೌರರಾದ ಶರಣು ಮೋದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here