ವೀರಶೈವ ಮಹಾಸಭೆ ವತಿಯಿಂದ ಕಲ್ಬುರ್ಗಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್:  ಡಾ. ಶರಣ್ ಬಿ ಪಾಟೀಲ

ಕಲಬುರಗಿ: ಉನ್ನತ ಹುದ್ದೆಗೆ ಎರಲ್ಲಿದ್ದೀರಿ ಅಧಿಕಾರಕ್ಕೆ ಸಿಕ್ಕಮೇಲೆ ಜನತೆ ಕೆಲಸ ಮಾಡಿ, ವಿಶೇಷವಾಗಿ ಬಡ ವರ್ಗಗಳ ಕುರಿತು ಹೆಚ್ಚಿನ ಕಾಳಜಿವಹಿಸಿ ನಿಷ್ಪಕ್ಷಪಾತವಾಗಿ  ಕೆಲಸ ಮಾಡಿ ಜಿಲ್ಲೆಗೆ ಕೀರ್ತಿ ತರುವುದಲ್ಲದೆ ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ಎಂದು ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವ ಕುಮಾರಿ ಸ್ಪರ್ಶ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶ್ರೀ ಗುರುಮೂರ್ತಿ ಶಿವಾಚಾರ್ಯರು ಪಾಳಾ ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗಳ್ಳಿ ಮಾತನಾಡಿ ಶೀಘ್ರದಲ್ಲಿ ಉನ್ನತ ಅಧಿಕಾರಿಯಾಗಲಿ ದ್ದೀರಿ ಅಧಿಕಾರ ಸ್ವೀಕರಿಸಿದ ಮೇಲೆ ಒತ್ತಡಗಳು ಬರುತ್ತಿರುತ್ತವೆ ಎಂತದೆ ಸಂದರ್ಭ ಬಂದರೂ ಸಂವಿಧಾನ ಬದ್ಧವಾಗಿ ಕೆಲಸ ಮಾಡಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿ ಕೆಲವು ಸಂದರ್ಭ ಎಂಥವರಿಗೂ ದುಷ್ಟಶಕ್ತಿಗಳು ಕಾಡುತ್ತವೆ ಅಂಥವುಗಳಿಗೆ ಲಕ್ಷಕೊಡದೆ ನ್ಯಾಯದ ಪರವಾಗಿ  ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಡಾ. ಶರಣ್ ಬಿ ಪಾಟೀಲ, ಸ್ಪರ್ಶ ಅವರು ಯುಪಿಎಸ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ನಮ್ಮ ಸಮಾಜಕ್ಕೆ ಕೀರ್ತಿ ತಂದಿದ್ದು, ಈ ಪ್ರದೇಶದಿಂದ ನಮ್ಮ ಸಮಾಜದ ಇನ್ನೂ ಹೆಚ್ಚಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವಂತೆ ಆಗಬೇಕು ಅದಕ್ಕಾಗಿ ವೀರಶೈವ ಮಹಾಸಭೆ ವತಿಯಿಂದ ಕಲ್ಬುರ್ಗಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ತೆರೆಯುತ್ತೇವೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಮಾತನಾಡಿ ಸ್ಪರ್ಶ, ಪ್ರಯತ್ನ ಮಾಡಿದರೆ ಯಾವುದೂ ದೊಡ್ಡದಲ್ಲ ನಾಗರಿಕ ಸೇವಾ ಪರೀಕ್ಷೆ ಪಾಸ್ ಆಗಬೇಕೆಂದು ನನ್ನ ಕನಸಾಗಿತ್ತು ಇಂದು ನನಸಾಗಿದೆ ಅದಕ್ಕೆ ಸರ್ಕಾರ ನೀಡಿದ ತಂದೆ-ತಾಯಿಯರು ಬಂಧುಬಳಗದವರಿಗೆ ಇತರರಿಗೆ ನಾನು ಋಣಿಯಾಗಿದ್ದೇನೆ ಎಲ್ಲರ ವಿಶ್ವಾಸ ಗಳಿಸುವಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಮಾರಂಭದಲ್ಲಿ ಮಹಾಸಭೆಯ ಉಪಾಧ್ಯಕ್ಷರಾದ ಸಿದ್ದು ಪಾಟೀಲ್, ಅಬ್ಜಲ್ಪುರ್ ಕರ್,  ಖಜಾಂಚಿಯಾದ ಗೌರಿ ಚಿಕೋಟಿ, ಚೆನ್ನಪ್ಪ ದಿಗ್ಗಾವಿ, ಕಾರ್ಯಕಾರಣಿ ಸದಸ್ಯರಾದ ಭೀಮಶಂಕರ್ ಮಿ ಟೇಕರ್, ಸಂತೋಷ್ ಗಂಗಸಿರಿ, ಮಹಿಳಾ ಘಟಕ ಅಧ್ಯಕ್ಷರಾದ ಡಾ. ಸುಧಾ ಹಾಳಕಾಯಿ, ಶಿವರಾಜ್ ಪಾಟೀಲ್, ಶಾಂತ ರೆಡ್ಡಿ, ತಾತ ಗೌಡ ಪಾಟೀಲ್ ಕೂಡಿ ಸೇರಿದಂತೆ ಇನ್ನಿತರರಿದ್ದರು. ಯುವ ಘಟಕ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ನಿರೂಪಿಸಿದರು ಸೋಮಶೇಖರ್ ಮಠಪತಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420