ಇಂದು 10:30ಕ್ಕೆ ಪುಸ್ತಕ-ಸಂವಾದ

0
50

ವಾಡಿ: ಸಂಚಲನ ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ವತಿಯಿಂದ ಆ.೮ ರಂದು ಬೆಳಗ್ಗೆ ೧೦:೩೦ಕ್ಕೆ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಪುಸ್ತಕ ಓದು-ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಡಿಎವಿ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕ ಎನ್.ಗೋಪಾಲಕೃಷ್ಣ ಹಾಗೂ ಎಸಿಸಿ ಉಪ ವ್ಯವಸ್ಥಾಪಕ ಲಕ್ಷ್ಮೀಕಾಂತ ಬಿರಾದಾರ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಚಲನ ವೇದಿಕೆ ಅಧ್ಯಕ್ಷ ವಿಕ್ರಮ ನಿಂಬರ್ಗಾ ಅಧ್ಯಕ್ಷತೆ ವಹಿಸುವರು.

Contact Your\'s Advertisement; 9902492681

ಹಿರಿಯ ಸಾಹಿತಿ ಬಸವರಾಜ ಕಟ್ಟಿಮನಿ ಅವರ ಮಾಡಿ ಮಡಿದವರು ಕೃತಿಯನ್ನು ಯುವ ಬರಹಗಾರ ವೀರಣ್ಣ ಯಾರಿ ಓದಿ ವಿಚಾರ ಮಂಡಿಸುವರು ಎಂದು ಸಂಚಲನ ವೇದಿಕೆ ಕಾರ್ಯದರ್ಶಿ ಶ್ರವಣಕುಮಾರ ಮೌಸಲಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here