ಬಿಡದಿ: ಕರೋನಾ ಸಾಂಕ್ರಾಮಿಕ ಪಿಡುಗಿನಿಂದ ಕಾರ್ಮಿಕರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಬೃಹತ್ ಮತ್ತು ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಅವರು ಇಂದು ಬಿಡದಿಯ ಕೋಕೊ ಕೋಲಾ ಫ್ಯಾಕ್ಟರಿಗೆ ಭೇಟಿ ನೀಡಿ ಮಾತನಾಡಿದರು. ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರ ಹಾಗೂ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ದೇಶ ಹಾಗೂ ರಾಜ್ಯದ ಆರ್ಥಿಕತೆಯ ಗಾಲಿ ಮುಂದೆ ಸಾಗಲು ಕೈಗಾರಿಕಾ ಕ್ಷೇತ್ರದ ತನ್ನ ಕಾರ್ಯ ಆರಂಭ ಮಾಡಬೇಕಾಗಿರುವುದು ಅನಿವಾರ್ಯ. ಇದನ್ನು ಮನಗೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಲಾಕ್ ಡೌನ್ ಸಡಲಿಕೆ ಮಾಡಿದೆ. ಆದರೆ, ಕರೋನಾ ಮಹಾಮಾರಿಯ ತೊಂದರೆ ಇನ್ನು ತಪ್ಪಿಲ್ಲ. ಕರೋನಾ ಜೊತೆಯಲ್ಲಿಯೇ ಬದುಕಲು ನಾವು ಕಲಿತುಕೊಳ್ಳಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ನಮ್ಮ ಬದುಕಿನ ಕರ್ತವ್ಯಗಳಾಗಿ ಸ್ವೀಕರಿಸಬೇಕು ಎಂದು ಹೇಳಿದರು.
ಕಾರ್ಮಿಕರ ಸುರಕ್ಷತೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾರ್ಖಾನೆಗಳು ತಮ್ಮ ಕೆಲಸವನ್ನು ಮುಂದುವರೆಸಿಕೊಂಡು ಹೋಗಬೇಕು. ಕಾರ್ಮಿಕರುಗಳಿಗೆ ಅಗತ್ಯವಿರುವ ಸುರಕ್ಷತಾ ಸೌಲಭ್ಯಗಳನ್ನು ಕಾರ್ಖಾನೆ ಆಡಳಿತ ಮಂಡಳಿ ಒದಗಿಸುವ ಮೂಲಕ ಕಾರ್ಖಾನೆಯ ಕೆಲಸಗಳು ಮುಂದುವರೆಸಿಕೊಂಡು ಹೋಗಬೇಕು ಎಂದರು. ಕೋಕೊ ಕೋಲಾ ಫ್ಯಾಕ್ಟರಿಯಲ್ಲಿ ಅಳವಡಿಸಿಕೊಂಡಿರುವ ಸುರಕ್ಷತೆಯ ಕ್ರಮಗಳನ್ನು ಪರಿಶೀಲಿಸಿದರು.
ಇದೇ ವೇಳೆ ಕೊಕೋ ಕೋಲಾ ಕಂಪನಿಯ ಆವರಣದಲ್ಲಿ ಮಾನ್ಯ ಸಚಿವರ ಭೇಟಿಯ ನೆನಪಿಗೆ ಗಿಡವನ್ನು ನೆಡಲಾಯಿತು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…