ಮಕ್ಕಳಿಗೆ ನೋಟ್‌ಬುಕ್ ಪೆನ್ ವಿತರಣೆ

0
41

ಕಲಬುರಗಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ೧ ವರ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಸಿ ನೆಟ್ಟು, ಅನಾಥ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್‌ಗಳನ್ನು ವಿತರಿಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಸೈಬಣ್ಣ ಜಮಾದಾರ ಮಾತನಾಡಿ, ಪಕ್ಷವು ಸಾಮಾಜಿಕ ಕಳಕಳಿಯೊಂದಿಗೆ ಜನರಿಗೆ ಹತ್ತಿರವಾಗಿ ಕೆಲಸ ಮಾಡುತ್ತಿದೆ. ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಿಸಲು ಹೋರಾಡಲಾಗುತ್ತಿದೆ ಎಂದರು.

Contact Your\'s Advertisement; 9902492681

ಈ ಸಂದರ್ಭಲ್ಲಿ ಜಗದೇವಿ ಚವ್ಹಾಣ, ಸಂಜು ಹೋಡಲ್ಕರ್, ರವಿ ನಾಟೀಕರ್, ಶ್ವೇತಾ ಕೋಟೆ, ಸೇರಿದತೆ ಇನ್ನಿತರರು ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here