ನದಿ ಪ್ರವಾಹದಿಂದ ಗುಡ್ಡದಲ್ಲಿ ಸಿಲುಕಿದ್ದ ಕುರಿಗಾಹಿ ರಕ್ಷಿಸಿದ ಎನ್‌ಡಿಆರ್‌ಎಫ್ ತಂಡ

ಸುರಪುರ: ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದ ಛಾಯಾ ಭಗವತಿ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಕುರಿ ಮೇಯಿಸಲು ಹೋಗಿ ಕೃಷ್ಣಾ ನದಿ ಪ್ರವಾಹದಿಂದ ಕಳೆದ ಐದು ದಿನಗಳಿಂದ ಗುಡ್ಡದಲ್ಲಿಯೇ ಕಾಲಕಳೆದಿದ್ದ ಕುರಿಗಾಹಿಯನ್ನು ಎನ್‌ಡಿಆರ್‌ಎಫ್ ತಂಡ ರಕ್ಷಿಸಿದ ಘಟನೆ ನಡೆದಿದೆ.

ಕುರಿಗಾಹಿ ಟೋಪಣ್ಣ ಎನ್ನುವವರು ಕುರಿ ಮೇಯಿಸಲು ಗುಡ್ಡದಲ್ಲಿ ಹೋದಾಗ ಪ್ರವಾಹ ಬಂದಿದ್ದರಿಂದ ಗುಡ್ಡದ ಸುತ್ತಲು ನೀರು ಸುತ್ತುವರೆದಿದ್ದು ಆಚೆ ಬರಲಾಗದೆ ಕಳೆದ ಐದು ದಿನಗಳಿಂದ ಗುಡ್ಡದಲ್ಲಿ ಸಿಲುಕಿದ್ದ.ಈ ಸುದ್ದಿ ತಿಳಿದು ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ಸುಪುತ್ರ ಮಣಿಕಂಠಗೌಡ ಛಾಯಾ ಭಗವತಿ ದೇವಸ್ಥಾನದ ಬಳಿಯಿಂದ ಡ್ರೋಣ್ ಕ್ಯಾಮರಾ ಬಳಸಿ ಗುಡ್ಡದಲ್ಲಿ ಕುರಿಗಾಹಿ ಇರುವುದನ್ನು ಶನಿವಾರ ಪತ್ತೆ ಹಚ್ಚಲಾಗಿತ್ತು.

ನಂತರ ಶಾಸಕ ರಾಜುಗೌಡ ಕಾಳಜಿವಹಿಸಿ ಎನ್‌ಡಿಆರ್‌ಎಫ್ ತಂಡವನ್ನು ತರಿಸಿ ರವಿವಾರ ಮುಂಜಾನೆ ಹನ್ನೊಂದು ಗಂಟೆಯ ವೇಳೆಗೆ ಕುರಿಗಾಹಿಯನ್ನು ಕರೆತರುವ ಕಾರ್ಯಾಚರಣೆ ಆರಂಭಿಸಲಾಗಿತ್ತು.ಅದರಂತೆ ಎನ್‌ಡಿಆರ್‌ಎಫ್ ತಂಡ ಗುಡ್ಡದಲ್ಲಿದ್ದ ಕುರಿಗಾಹಿ ಟೋಪಣ್ಣನನ್ನು ಕರೆತರಲು ಹೋಗಿತ್ತು.ಆದರೆ ೨೦೦ಕ್ಕೂ ಹೆಚ್ಚಿನ ಕುರಿಗಳನ್ನು ಬಿಟ್ಟು ಬರಲು ಟೋಪಣ್ಣ ಒಪ್ಪದಿದ್ದಾಗ ತಂಡ ಹೇಗೊ ಮನವೊಲಿಸಿ ಟೋಪಣ್ಣ ಹಾಗು ಜೊತೆಯಲ್ಲಿದ್ದ ಶ್ವಾನವನ್ನು ಕರೆತರಲಾಯಿತು.

ಕುರಿಗಾಹಿ ಟೋಪಣ್ಣನನ್ನು ಕರೆತರುತ್ತಿದ್ದಂತೆ ಜನರಲ್ಲಿ ಹರ್ಷ ಉಕ್ಕಿಬಂತು.ಎಲ್ಲರು ಎನ್‌ಡಿಆರ್‌ಎಫ್ ತಂಡದ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ ಜಯಕಾರ ಹಾಕಿದರು.ನಂತರ ಶಾಸಕ ರಾಜುಗೌಡ ಎಲ್ಲಾ ಎನ್‌ಡಿಆರ್‌ಎಫ್ ತಂಡದ ಸದಸ್ಯರಿಗೆ ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಿ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಡ್ರೋಣ್ ಕ್ಯಾಮರಾ ಮೂಲಕ ಕುರಿಹಾಗಿಯನ್ನು ಪತ್ತೆ ಹಚ್ಚಿದ ಶಾಸಕರ ಸುಪುತ್ರ ಮಣಿಕಂಠಗೌಡನ ಶ್ರಮಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು ತಾಲೂಕು ಪಂಚಾಯತಿ ಇಒ ಅಂಬ್ರೇಶ ಹಾಗು ಪೊಲೀಸ್ ಅಧಿಕಾರಿಗಳು ಸೇರಿದಂತೆ ಅನೇಕರಿದ್ದರು.ಇಡೀ ರಾಜ್ಯದ ಜನರ ಗಮನ ಸೆಳೆದಿದ್ದ ಕುರಿಗಾಹಿಯ ಸಂಗತಿ ಭಾನುವಾರ ಸುಖಾಂತ್ಯ ಕಂಡಿದೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420